<p>ತಿಪಟೂರು: ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳು ಬೆಳವಣಿಗೆ ಹೊಂದಬೇಕಾದರೆ ಪ್ರೋತ್ಸಾಹ ನೀಡುವ ಆಸಕ್ತ ಮನಸ್ಸುಗಳು ಮುಖ್ಯ ಎಂದು ಸಾಹಿತಿ ಹಾಗೂ ಕವಿ ಬಿ.ಆರ್ ಲಕ್ಷ್ಮಣ್ ರಾವ್ ಹೇಳಿದರು.</p>.<p>ನಗರದ ಹೊರವಲಯದಲ್ಲಿ ಆಯೋಜಿಸಿದ್ದ ಬಯಲು ಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘದ ಬೆಳ್ಳಿಹಬ್ಬದ ಅಂಗವಾಗಿ ಗೌರವ ಸದಸ್ಯತ್ವ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಲೆ, ಸಾಹಿತ್ಯ, ಸಾಮಾಜಿಕ ಕ್ಷೇತ್ರದ ಆಸಕ್ತಿ ಉಳ್ಳ ಮನಸ್ಸುಗಳಿಂದ ಪ್ರೋತ್ಸಾಹ ಸಾಧ್ಯವಾಗುತ್ತದೆ. ಬಯಲು ಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ ಕಲೆ ಸಾಹಿತ್ಯ ಸೇವೆಯ ಮೂಲಕ ಇಪ್ಪತ್ತೈದು ವಸಂತ ಪೂರೈಸಿರುವುದು ಶ್ಲಾಘನೀಯ ಎಂದರು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ಸಂಘಸಂಸ್ಥೆಗಳ ಹುಟ್ಟುಹಾಕುವುದಕ್ಕಿಂತ ಅವುಗಳನ್ನು ಸಾಮಾಜಿಕವಾಗಿ ಬೆಳೆಸುವ ಕೆಲಸ ಮಾಡುವುದು ಮುಖ್ಯ. ಸಂಘ ಉತ್ತಮದಾರಿಯಲ್ಲಿ ಸಾಗಿ ಬೆಳ್ಳಿಹಬ್ಬ ಆಚರಿಸುತ್ತಿದೆ. ಇನ್ನೂ ಹೆಚ್ಚಿನ ಸಾಮಾಜಿಕ ಸೇವೆ ಮಾಡಲಿ ಎಂದರು.</p>.<p>ವೆಂಕಟನಾರಾಯಣ್, ತಹಶೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ಜಗನ್ನಾಥ್, ಟಿಎಸ್ ನಾಗರಾಜ ಶೆಟ್ಟಿ, ಎಚ್.ಸಿ ನಾಗರಾಜ್, ಲಿಂಗಪ್ಪ, ಎನ್.ಬಾನುಪ್ರಶಾಂತ್, ಕೆ.ಎನ್ ರೇಣುಕಯ್ಯ, ಉದಯರವಿ, ಕೆ.ಎಂ ರಾಜಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-500781766</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳು ಬೆಳವಣಿಗೆ ಹೊಂದಬೇಕಾದರೆ ಪ್ರೋತ್ಸಾಹ ನೀಡುವ ಆಸಕ್ತ ಮನಸ್ಸುಗಳು ಮುಖ್ಯ ಎಂದು ಸಾಹಿತಿ ಹಾಗೂ ಕವಿ ಬಿ.ಆರ್ ಲಕ್ಷ್ಮಣ್ ರಾವ್ ಹೇಳಿದರು.</p>.<p>ನಗರದ ಹೊರವಲಯದಲ್ಲಿ ಆಯೋಜಿಸಿದ್ದ ಬಯಲು ಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘದ ಬೆಳ್ಳಿಹಬ್ಬದ ಅಂಗವಾಗಿ ಗೌರವ ಸದಸ್ಯತ್ವ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕಲೆ, ಸಾಹಿತ್ಯ, ಸಾಮಾಜಿಕ ಕ್ಷೇತ್ರದ ಆಸಕ್ತಿ ಉಳ್ಳ ಮನಸ್ಸುಗಳಿಂದ ಪ್ರೋತ್ಸಾಹ ಸಾಧ್ಯವಾಗುತ್ತದೆ. ಬಯಲು ಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ ಕಲೆ ಸಾಹಿತ್ಯ ಸೇವೆಯ ಮೂಲಕ ಇಪ್ಪತ್ತೈದು ವಸಂತ ಪೂರೈಸಿರುವುದು ಶ್ಲಾಘನೀಯ ಎಂದರು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ಸಂಘಸಂಸ್ಥೆಗಳ ಹುಟ್ಟುಹಾಕುವುದಕ್ಕಿಂತ ಅವುಗಳನ್ನು ಸಾಮಾಜಿಕವಾಗಿ ಬೆಳೆಸುವ ಕೆಲಸ ಮಾಡುವುದು ಮುಖ್ಯ. ಸಂಘ ಉತ್ತಮದಾರಿಯಲ್ಲಿ ಸಾಗಿ ಬೆಳ್ಳಿಹಬ್ಬ ಆಚರಿಸುತ್ತಿದೆ. ಇನ್ನೂ ಹೆಚ್ಚಿನ ಸಾಮಾಜಿಕ ಸೇವೆ ಮಾಡಲಿ ಎಂದರು.</p>.<p>ವೆಂಕಟನಾರಾಯಣ್, ತಹಶೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ಜಗನ್ನಾಥ್, ಟಿಎಸ್ ನಾಗರಾಜ ಶೆಟ್ಟಿ, ಎಚ್.ಸಿ ನಾಗರಾಜ್, ಲಿಂಗಪ್ಪ, ಎನ್.ಬಾನುಪ್ರಶಾಂತ್, ಕೆ.ಎನ್ ರೇಣುಕಯ್ಯ, ಉದಯರವಿ, ಕೆ.ಎಂ ರಾಜಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-17-500781766</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>