<p>ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಹಸಿರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ. ಶಿವಮೊಗ್ಗದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಊರು. ತೀರ್ಥಹಳ್ಳಿ - ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಈ ದುರ್ಗ ಎದುರಾಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರ ತಾಣ.<br /> <br /> ಹೆಜ್ಜೆ ಮೇಲೆ ಹೆಜ್ಜೆಯಿಟ್ಟರೂ ಸದ್ದು ಪ್ರತಿಧ್ವನಿಸುವಷ್ಟು ಪ್ರಶಾಂತ ಹಾಗೂ ಮೌನದ ಪರಿಸರ ಇಲ್ಲಿನದು. ಹಸಿರನ್ನು ಕಣ್ತುಂಬಿಕೊಳ್ಳುವುದು ಮಾತ್ರವಲ್ಲ- ಇತಿಹಾಸದ ಅರಿವನ್ನು ಮನದುಂಬಿಕೊಳ್ಳಲು ಇಲ್ಲಿ ಸಾಕಷ್ಟು ಅವಕಾಶವಿದೆ. ಇತಿಹಾಸದ ಕುರುಹುಗಳ ಹಿಂದೆ ನಡೆದರೆ, ಈ ದುರ್ಗವನ್ನು ಹಿಂದೊಮ್ಮೆ ಭುವನಗಿರಿ ದುರ್ಗ, ಕೌಲೇದುರ್ಗ ಎಂದು ಕರೆಯುತ್ತಿದ್ದುದಾಗಿ ತಿಳಿದುಬರುತ್ತದೆ.<br /> <br /> ಕವಲೇದುರ್ಗದಲ್ಲಿನ ಆಕರ್ಷಣೆಗಳಲ್ಲಿ ತಿಮ್ಮಣ್ಣನಾಯಕನ ಕೆರೆಯೂ ಒಂದು. ಹದಿನೆಂಟು ಎಕರೆ ವಿಸ್ತೀರ್ಣದ ಈ ಕೆರೆ, ಹಕ್ಕಿಗಳ ಚಿಲಿಪಿಲಿ ಕಲರವದಿಂದ, ಮೀನುಗಳ ಮುಳುಗಾಟದಿಂದ, ಬೆಳ್ಳಕ್ಕಿಯ ಹಿಂಡಿನಿಂದ ಗಮನಸೆಳೆಯುತ್ತದೆ. ಕೆರೆಯ ಮೇಲಿನಿಂದ ತೇಲಿಬರುವ ತಂಗಾಳಿಗೆ ಮೈಯೊಡ್ಡಿ ಜಲಚರಗಳ ದನಿ ಕೇಳಿಸಿಕೊಳ್ಳುವುದು ಹಿತವಾದ ಅನುಭವ.<br /> <br /> ಕೆಳದಿ ಅರಸರು ನಿರ್ಮಿಸಿದ ವೀರಶೈವ ಮಠ ಕವಲೇದುರ್ಗದಲ್ಲಿದೆ. ಈ ಅರಸರಿಗೆ ಏಳರ ಮೇಲೆ ವಿಶೇಷ ಮಮಕಾರ ಇದ್ದಿರಬೇಕು. ಆ ಕಾರಣದಿಂದಲೇ, ಏಳು ಸುತ್ತಿನ ಕೋಟೆ, ಏಳು ಕೆರೆಗಳು ಇಲ್ಲಿವೆ. ಇಷ್ಟುಮಾತ್ರವಲ್ಲ, ಅರಸರು ಆರಾಧಿಸುತ್ತಿದ್ದ ನಾಗದೇವರಿಗೆ ಕೂಡ ಏಳು ಹೆಡೆ! <br /> <br /> ಮಠದಿಂದ ಸುಮಾರು ಒಂದು ಕಿ.ಮೀ. ಮುಂದೆ ಸಾಗಿದರೆ ಕೋಟೆಯ ಮುಖ್ಯದ್ವಾರ ಎದುರಾಗುತ್ತದೆ. ಮಹಾದ್ವಾರ ಪ್ರವೇಶಿಸಿದಂತೆ ಸುಮಾರು 50-60 ಅಡಿ ಎತ್ತರದ ಗೋಡೆ ನೋಡಬಹುದು. ಗೋಡೆಯ ಮೇಲೆ ಅಂದಿನ ಕಾಲದ ಚಿತ್ರಕಲೆಯನ್ನು ನೋಡಬಹುದು. <br /> <br /> ಕಾವಲುಗಾರರು ಉಳಿದುಕೊಳ್ಳಲು ಮಾಡಿದ್ದ ಚೌಕಾಕಾರದ ಕಾವಲುಗಾರ ಕೊಠಡಿ ಹಾಗೂ ಒಳಭಾಗದಲ್ಲಿ ಮುಖ ಮಂಟಪವನ್ನು ಎರಡನೇ ಮಹಾದ್ವಾರ ಹಾಯುವಾಗ ನೋಡಬಹುದು. <br /> <br /> ಮಂಟಪದ ಎಡಭಾಗದಲ್ಲಿ `ನಾಗತೀರ್ಥ~ವೆಂಬ ಕೊಳ ಹಾಗೂ ಸುಮಾರು 6 ಅಡಿ ಎತ್ತರದ ಏಳು ಹೆಡೆಯ ಏಕಶಿಲಾ ನಾಗರ ಶಿಲ್ಪವನ್ನು ನೋಡಬಹುದು. ಮೂರನೆ ಮಹಾದ್ವಾರದ ಬಲಭಾಗದಲ್ಲಿ ನಗಾರಿ ಕಟ್ಟೆಯಿದೆ. ಈ ಪರಿಸರದಲ್ಲಿ ಒಂದು ಸುರಂಗ ಮಾರ್ಗವನ್ನೂ ಕಾಣಬಹುದು. <br /> <br /> ನಾಲ್ಕನೆಯ ಮಹಾದ್ವಾರ ತಲುಪಲು ಇಳಿಜಾರಿನ ಹಾಸುಗಲ್ಲನ್ನು ದಾಟಬೇಕು. ಅಲ್ಲಿಯೂ ಒಂದು ಮುಖಮಂಟಪವನ್ನು ನೋಡಬಹುದು. <br /> <br /> ಕವಲೇದುರ್ಗದಲ್ಲಿ ವಿಶ್ವನಾಥೇಶ್ವರ ದೇವಾಲಯವಿದೆ. ಈ ದೇವಾಲಯದ ಹೊರಭಾಗದಲ್ಲಿ ಅನೇಕ ಕಲಾಕೃತಿಗಳನ್ನು ಕಾಣಬಹುದು. ಕಾಶಿಯಿಂದ ತಂದ ಅಮೃತಶಿಲೆಯ ವಿಶ್ವನಾಥೇಶ್ವರನ ವಿಗ್ರಹವನ್ನು ಇಲ್ಲಿ ಪ್ರತಿಷ್ಠಾಪಿಸಲಾಗಿದೆಯಂತೆ. <br /> <br /> ಅರಸರ ಕಾಲದಲ್ಲಿ ತುಪ್ಪ ಹಾಗೂ ಎಣ್ಣೆಯನ್ನು ಶೇಖರಿಸಲು ಉಪಯೋಗಿಸುತ್ತಿದ್ದ ಬಾವಿಯನ್ನು ದುರ್ಗದಲ್ಲಿ ನೋಡಬಹುದು. ಇದಕ್ಕೆ ಎಣ್ಣೆ ಹಾಗೂ ತುಪ್ಪದ ಬಾವಿಯೆಂದೇ ಈಗಲೂ ಕರೆಯುತ್ತಾರೆ. ಶಿಸ್ತಿನ ಶಿವಪ್ಪನಾಯಕನ ಕಾಲದ ಏತನೀರಾವರಿ ಪದ್ಧತಿ ಬಳಕೆಯ ಕುರುಹುಗಳು ಕವಲೇದುರ್ಗದಲ್ಲಿ ಈಗಲೂ ಕಾಣಬಹುದು. <br /> <br /> ದಟ್ಟ ಅರಣ್ಯದ ನಡುವೆ ಸುಮಾರು ಅರ್ಧ ಎಕರೆ ಪ್ರದೇಶದಲ್ಲಿರುವ ಅರಮನೆ ಕಲ್ಲು ಕಂಬಗಳ ಆಸರೆ ಹೊಂದಿದೆ. ಅರಮನೆಗೀಗ ಆಕಾಶವೇ ಛಾವಣಿ. ಕಂಬಗಳು ಮತ್ತು ಮಣ್ಣಿನ ಗೋಡೆಗಳು ಮಾತ್ರ ಉಳಿದಿವೆ. <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಹಸಿರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ. ಶಿವಮೊಗ್ಗದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಊರು. ತೀರ್ಥಹಳ್ಳಿ - ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಈ ದುರ್ಗ ಎದುರಾಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರ ತಾಣ.<br /> <br /> ಹೆಜ್ಜೆ ಮೇಲೆ ಹೆಜ್ಜೆಯಿಟ್ಟರೂ ಸದ್ದು ಪ್ರತಿಧ್ವನಿಸುವಷ್ಟು ಪ್ರಶಾಂತ ಹಾಗೂ ಮೌನದ ಪರಿಸರ ಇಲ್ಲಿನದು. ಹಸಿರನ್ನು ಕಣ್ತುಂಬಿಕೊಳ್ಳುವುದು ಮಾತ್ರವಲ್ಲ- ಇತಿಹಾಸದ ಅರಿವನ್ನು ಮನದುಂಬಿಕೊಳ್ಳಲು ಇಲ್ಲಿ ಸಾಕಷ್ಟು ಅವಕಾಶವಿದೆ. ಇತಿಹಾಸದ ಕುರುಹುಗಳ ಹಿಂದೆ ನಡೆದರೆ, ಈ ದುರ್ಗವನ್ನು ಹಿಂದೊಮ್ಮೆ ಭುವನಗಿರಿ ದುರ್ಗ, ಕೌಲೇದುರ್ಗ ಎಂದು ಕರೆಯುತ್ತಿದ್ದುದಾಗಿ ತಿಳಿದುಬರುತ್ತದೆ.<br /> <br /> ಕವಲೇದುರ್ಗದಲ್ಲಿನ ಆಕರ್ಷಣೆಗಳಲ್ಲಿ ತಿಮ್ಮಣ್ಣನಾಯಕನ ಕೆರೆಯೂ ಒಂದು. ಹದಿನೆಂಟು ಎಕರೆ ವಿಸ್ತೀರ್ಣದ ಈ ಕೆರೆ, ಹಕ್ಕಿಗಳ ಚಿಲಿಪಿಲಿ ಕಲರವದಿಂದ, ಮೀನುಗಳ ಮುಳುಗಾಟದಿಂದ, ಬೆಳ್ಳಕ್ಕಿಯ ಹಿಂಡಿನಿಂದ ಗಮನಸೆಳೆಯುತ್ತದೆ. ಕೆರೆಯ ಮೇಲಿನಿಂದ ತೇಲಿಬರುವ ತಂಗಾಳಿಗೆ ಮೈಯೊಡ್ಡಿ ಜಲಚರಗಳ ದನಿ ಕೇಳಿಸಿಕೊಳ್ಳುವುದು ಹಿತವಾದ ಅನುಭವ.<br /> <br /> ಕೆಳದಿ ಅರಸರು ನಿರ್ಮಿಸಿದ ವೀರಶೈವ ಮಠ ಕವಲೇದುರ್ಗದಲ್ಲಿದೆ. ಈ ಅರಸರಿಗೆ ಏಳರ ಮೇಲೆ ವಿಶೇಷ ಮಮಕಾರ ಇದ್ದಿರಬೇಕು. ಆ ಕಾರಣದಿಂದಲೇ, ಏಳು ಸುತ್ತಿನ ಕೋಟೆ, ಏಳು ಕೆರೆಗಳು ಇಲ್ಲಿವೆ. ಇಷ್ಟುಮಾತ್ರವಲ್ಲ, ಅರಸರು ಆರಾಧಿಸುತ್ತಿದ್ದ ನಾಗದೇವರಿಗೆ ಕೂಡ ಏಳು ಹೆಡೆ! <br /> <br /> ಮಠದಿಂದ ಸುಮಾರು ಒಂದು ಕಿ.ಮೀ. ಮುಂದೆ ಸಾಗಿದರೆ ಕೋಟೆಯ ಮುಖ್ಯದ್ವಾರ ಎದುರಾಗುತ್ತದೆ. ಮಹಾದ್ವಾರ ಪ್ರವೇಶಿಸಿದಂತೆ ಸುಮಾರು 50-60 ಅಡಿ ಎತ್ತರದ ಗೋಡೆ ನೋಡಬಹುದು. ಗೋಡೆಯ ಮೇಲೆ ಅಂದಿನ ಕಾಲದ ಚಿತ್ರಕಲೆಯನ್ನು ನೋಡಬಹುದು. <br /> <br /> ಕಾವಲುಗಾರರು ಉಳಿದುಕೊಳ್ಳಲು ಮಾಡಿದ್ದ ಚೌಕಾಕಾರದ ಕಾವಲುಗಾರ ಕೊಠಡಿ ಹಾಗೂ ಒಳಭಾಗದಲ್ಲಿ ಮುಖ ಮಂಟಪವನ್ನು ಎರಡನೇ ಮಹಾದ್ವಾರ ಹಾಯುವಾಗ ನೋಡಬಹುದು. <br /> <br /> ಮಂಟಪದ ಎಡಭಾಗದಲ್ಲಿ `ನಾಗತೀರ್ಥ~ವೆಂಬ ಕೊಳ ಹಾಗೂ ಸುಮಾರು 6 ಅಡಿ ಎತ್ತರದ ಏಳು ಹೆಡೆಯ ಏಕಶಿಲಾ ನಾಗರ ಶಿಲ್ಪವನ್ನು ನೋಡಬಹುದು. ಮೂರನೆ ಮಹಾದ್ವಾರದ ಬಲಭಾಗದಲ್ಲಿ ನಗಾರಿ ಕಟ್ಟೆಯಿದೆ. ಈ ಪರಿಸರದಲ್ಲಿ ಒಂದು ಸುರಂಗ ಮಾರ್ಗವನ್ನೂ ಕಾಣಬಹುದು. <br /> <br /> ನಾಲ್ಕನೆಯ ಮಹಾದ್ವಾರ ತಲುಪಲು ಇಳಿಜಾರಿನ ಹಾಸುಗಲ್ಲನ್ನು ದಾಟಬೇಕು. ಅಲ್ಲಿಯೂ ಒಂದು ಮುಖಮಂಟಪವನ್ನು ನೋಡಬಹುದು. <br /> <br /> ಕವಲೇದುರ್ಗದಲ್ಲಿ ವಿಶ್ವನಾಥೇಶ್ವರ ದೇವಾಲಯವಿದೆ. ಈ ದೇವಾಲಯದ ಹೊರಭಾಗದಲ್ಲಿ ಅನೇಕ ಕಲಾಕೃತಿಗಳನ್ನು ಕಾಣಬಹುದು. ಕಾಶಿಯಿಂದ ತಂದ ಅಮೃತಶಿಲೆಯ ವಿಶ್ವನಾಥೇಶ್ವರನ ವಿಗ್ರಹವನ್ನು ಇಲ್ಲಿ ಪ್ರತಿಷ್ಠಾಪಿಸಲಾಗಿದೆಯಂತೆ. <br /> <br /> ಅರಸರ ಕಾಲದಲ್ಲಿ ತುಪ್ಪ ಹಾಗೂ ಎಣ್ಣೆಯನ್ನು ಶೇಖರಿಸಲು ಉಪಯೋಗಿಸುತ್ತಿದ್ದ ಬಾವಿಯನ್ನು ದುರ್ಗದಲ್ಲಿ ನೋಡಬಹುದು. ಇದಕ್ಕೆ ಎಣ್ಣೆ ಹಾಗೂ ತುಪ್ಪದ ಬಾವಿಯೆಂದೇ ಈಗಲೂ ಕರೆಯುತ್ತಾರೆ. ಶಿಸ್ತಿನ ಶಿವಪ್ಪನಾಯಕನ ಕಾಲದ ಏತನೀರಾವರಿ ಪದ್ಧತಿ ಬಳಕೆಯ ಕುರುಹುಗಳು ಕವಲೇದುರ್ಗದಲ್ಲಿ ಈಗಲೂ ಕಾಣಬಹುದು. <br /> <br /> ದಟ್ಟ ಅರಣ್ಯದ ನಡುವೆ ಸುಮಾರು ಅರ್ಧ ಎಕರೆ ಪ್ರದೇಶದಲ್ಲಿರುವ ಅರಮನೆ ಕಲ್ಲು ಕಂಬಗಳ ಆಸರೆ ಹೊಂದಿದೆ. ಅರಮನೆಗೀಗ ಆಕಾಶವೇ ಛಾವಣಿ. ಕಂಬಗಳು ಮತ್ತು ಮಣ್ಣಿನ ಗೋಡೆಗಳು ಮಾತ್ರ ಉಳಿದಿವೆ. <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>