<p>ಗದಗ: ‘ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆಯ ಕಲಾ ಕಾರ್ಯಕ್ರಮಗಳು ನಶಿಸಿಹೋಗುತ್ತಿರುವ ಈ ಸಂದರ್ಭದಲ್ಲಿ, ಈ ರೀತಿಯ ಸಂಗೀತ, ನೃತ್ಯ ಕಾರ್ಯಕ್ರಮಗಳು ಅವುಗಳಿಗೆ ಪುನರ್ಜನ್ಮ ನೀಡುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.</p>.<p>ನಗರದ ಪಂಡಿತ್ ಭೀಮಸೇನ ಜೋಶಿ ರಂಗಮಂದಿರದಲ್ಲಿ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ನಾಲ್ಕನೇ ವರ್ಷದ ಸಂಗೀತ, ನೃತ್ಯ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸ್ಥಳೀಯ ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾಗಿದೆ. ಇದಕ್ಕೆ ಯುವಕರು ಕೈಜೋಡಿಸಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಮಾತನಾಡಿ, ‘ಸಂಸ್ಥೆಯ ಮಕ್ಕಳು ಉತ್ತಮ ಗಾಯಕರಾಗಿ ಬೆಳೆದು, ಸಂಗೀತ ಹಾಗೂ ಕಲಾತ್ಮಕ ಚಟುವಟಿಕೆಗಳಲ್ಲಿ ಮುಂದುವರಿಯಲಿ’ ಎಂದು ಆಶಿಸಿದರು.</p>.<p>ಸಮಾಜ ಸೇವಕಿ ರೇಣುಕಾ ಪಾಟೀಲ ಮಾತನಾಡಿ, ಉಸಿರು ಫೌಂಡೇಶನ್ ಸದಾ ನಿಮ್ಮ ಸಂಸ್ಥೆಯು ಕೈಗೊಳ್ಳುವ ಚಟುವಟಿಕೆಗಳಿಗೆ ಕೈ ಜೋಡಿಸಲಿದೆ ಎಂದು ಹೇಳಿದರು.</p>.<p>ಸಾಹಿತಿ ನಿಂಗೂ ಸೊಲಗಿ ಮಾತನಾಡಿ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮವು ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ವೇದಿಕೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಇಮಾಮಸಾಬ ಮೊರಬದ ಹಾಗೂ ಮಾಬುಸಾಬ ಸಿದ್ದಿ, ಎಂ.ಎಸ್.ಚಿನ್ನೂರ ಮಾತನಾಡಿದರು. ವಸಂತ ಹಲಗಿ ಮತ್ತು ರಾಜು ಕರಣ ನಿರೂಪಣೆ ಮಾಡಿದರು. ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಉಜ್ವಲ್ ಕಬಾಡಿ ಇದ್ದರು.</p>.<p>ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ಮಕ್ಕಳಿಂದ ಸಂಗೀತ ಹಾಗೂ ಸಂತೋಷ ಅಸುಂಡಿ ಅವರ ನಿರ್ದೇಶನದಲ್ಲಿ ನೃತ್ಯ ಪ್ರದರ್ಶನಗಳು ನಡೆದವು. ಅಯ್ಯಪ್ಪ ಸ್ವಾಮಿಯ ಜೀವನಚರಿತ್ರೆಯ ಕುರಿತ ವಿಷಯಾಧಾರಿತ ನೃತ್ಯ ಎಲ್ಲರ ಮನಸೆಳೆಯಿತು.</p>.<p>ಭರತನಾಟ್ಯ ಶಿಕ್ಷಕಿ ವರ್ಷಾ ಕಲಕಂಬಿ ಅವರ ನೇತೃತ್ವದಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಶ್ರದ್ಧಾ ಕಬಾಡಿ ಹಾಗೂ ವರ್ಷಾ ಕಲಕಂಬಿ ಅದ್ಭುತ ಪ್ರದರ್ಶನ ನೀಡಿ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದರು.</p>.<p>ಅತಿಥಿ ಗಾಯಕರಾಗಿ ಹಿಂದೂಸ್ತಾನಿ ಸಂಗೀತ ಗಾಯಕ ರಾಮು ಕೊಡೇಕಲ್ ರಾಗ ಮುಲ್ತಾನಿ ಹಾಗೂ ನಿಂಗರಾಜ ಎಲಿಗಾರ ರಾಗ ಗಾವತಿ ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-2117344943</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆಯ ಕಲಾ ಕಾರ್ಯಕ್ರಮಗಳು ನಶಿಸಿಹೋಗುತ್ತಿರುವ ಈ ಸಂದರ್ಭದಲ್ಲಿ, ಈ ರೀತಿಯ ಸಂಗೀತ, ನೃತ್ಯ ಕಾರ್ಯಕ್ರಮಗಳು ಅವುಗಳಿಗೆ ಪುನರ್ಜನ್ಮ ನೀಡುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.</p>.<p>ನಗರದ ಪಂಡಿತ್ ಭೀಮಸೇನ ಜೋಶಿ ರಂಗಮಂದಿರದಲ್ಲಿ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ನಾಲ್ಕನೇ ವರ್ಷದ ಸಂಗೀತ, ನೃತ್ಯ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸ್ಥಳೀಯ ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾಗಿದೆ. ಇದಕ್ಕೆ ಯುವಕರು ಕೈಜೋಡಿಸಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಮಾತನಾಡಿ, ‘ಸಂಸ್ಥೆಯ ಮಕ್ಕಳು ಉತ್ತಮ ಗಾಯಕರಾಗಿ ಬೆಳೆದು, ಸಂಗೀತ ಹಾಗೂ ಕಲಾತ್ಮಕ ಚಟುವಟಿಕೆಗಳಲ್ಲಿ ಮುಂದುವರಿಯಲಿ’ ಎಂದು ಆಶಿಸಿದರು.</p>.<p>ಸಮಾಜ ಸೇವಕಿ ರೇಣುಕಾ ಪಾಟೀಲ ಮಾತನಾಡಿ, ಉಸಿರು ಫೌಂಡೇಶನ್ ಸದಾ ನಿಮ್ಮ ಸಂಸ್ಥೆಯು ಕೈಗೊಳ್ಳುವ ಚಟುವಟಿಕೆಗಳಿಗೆ ಕೈ ಜೋಡಿಸಲಿದೆ ಎಂದು ಹೇಳಿದರು.</p>.<p>ಸಾಹಿತಿ ನಿಂಗೂ ಸೊಲಗಿ ಮಾತನಾಡಿ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮವು ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ವೇದಿಕೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಇಮಾಮಸಾಬ ಮೊರಬದ ಹಾಗೂ ಮಾಬುಸಾಬ ಸಿದ್ದಿ, ಎಂ.ಎಸ್.ಚಿನ್ನೂರ ಮಾತನಾಡಿದರು. ವಸಂತ ಹಲಗಿ ಮತ್ತು ರಾಜು ಕರಣ ನಿರೂಪಣೆ ಮಾಡಿದರು. ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಉಜ್ವಲ್ ಕಬಾಡಿ ಇದ್ದರು.</p>.<p>ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ಮಕ್ಕಳಿಂದ ಸಂಗೀತ ಹಾಗೂ ಸಂತೋಷ ಅಸುಂಡಿ ಅವರ ನಿರ್ದೇಶನದಲ್ಲಿ ನೃತ್ಯ ಪ್ರದರ್ಶನಗಳು ನಡೆದವು. ಅಯ್ಯಪ್ಪ ಸ್ವಾಮಿಯ ಜೀವನಚರಿತ್ರೆಯ ಕುರಿತ ವಿಷಯಾಧಾರಿತ ನೃತ್ಯ ಎಲ್ಲರ ಮನಸೆಳೆಯಿತು.</p>.<p>ಭರತನಾಟ್ಯ ಶಿಕ್ಷಕಿ ವರ್ಷಾ ಕಲಕಂಬಿ ಅವರ ನೇತೃತ್ವದಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಶ್ರದ್ಧಾ ಕಬಾಡಿ ಹಾಗೂ ವರ್ಷಾ ಕಲಕಂಬಿ ಅದ್ಭುತ ಪ್ರದರ್ಶನ ನೀಡಿ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದರು.</p>.<p>ಅತಿಥಿ ಗಾಯಕರಾಗಿ ಹಿಂದೂಸ್ತಾನಿ ಸಂಗೀತ ಗಾಯಕ ರಾಮು ಕೊಡೇಕಲ್ ರಾಗ ಮುಲ್ತಾನಿ ಹಾಗೂ ನಿಂಗರಾಜ ಎಲಿಗಾರ ರಾಗ ಗಾವತಿ ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-2117344943</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>