<p>ನರಸಿಂಹರಾಜಪುರ: ಪಟ್ಟಣದ ಅಗ್ರಹಾರದ ಬ್ರಾಹ್ಮಣ ಮಹಾಸಭಾ ಭವನದಲ್ಲಿ ಭಾನುವಾರ ರಾಗ ಮಯೂರಿ ಅಕಾಡೆಮಿಯಿಂದ ಕಲಾಯನ-9 ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಂಗಭೂಮಿ ಕಲಾವಿದೆ ಅರ್ಪಿತಾ ಚೊಕ್ಕಾಡಿ, ಕಲಾವಿದರು ತಾವು ಕಲಿತ ಕಲೆಯನ್ನು ಎಂದಿಗೂ ನಿಲ್ಲಿಸಬಾರದು. ಕಲೆ ಎಂಬುದು ಸಾಗರದ ಅಲೆಯಂತೆ. ದೊರೆತ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.</p>.<p>ರಾಗಮಯೂರಿ ಅಕಾಡೆಮಿಯ ಭರತನಾಟ್ಯ ಕಲಾವಿದೆ ಧನ್ಯಶ್ರೀ ಮಾತನಾಡಿ, ರಾಗ ಮಯೂರಿ ಅಕಾಡೆಮಿಯಲ್ಲಿ ಸಂಗೀತ, ಭರತ ನಾಟ್ಯ ಕಲಿತ ವಿದ್ಯಾರ್ಥಿಗಳು ದೊಡ್ಡ ಊರುಗಳಲ್ಲಿ ಪ್ರದರ್ಶನ ಮಾಡಿ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ ಎಂದರು.</p>.<p>ಭರತ ನಾಟ್ಯ ಹಾಗೂ ಸಂಗೀತದಲ್ಲಿ ಜೂನಿಯರ್ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಂದ ಭರತ ನಾಟ್ಯ ಪ್ರದರ್ಶನ ನಡೆಯಿತು.</p>.<p>ಮಯೂರಿ ಅಕಾಡೆಮಿ ಸಂಗೀತ ನಿರ್ದೇಶಕಿ ಅಂಕಿತ ಪ್ರಜ್ವಲ್ ಅವರಿಂದ ನಟುವಾಂಗ, ಹರ್ಷಿತ ಹಾಗೂ ಸಂಪ್ರಿಯ ಅವರಿಂದ ಹಾಡುಗಾರಿಕೆ ನಡೆಯಿತು ಮೃದಂಗದಲ್ಲಿ ಅರವಿಂದ ಹೊಳ್ಳ, ವಯೋಲಿನ್ನಲ್ಲಿ ಮಧು ಮರಳಿ ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಅಕಾಡೆಮಿಯ ಕಾರ್ಯದರ್ಶಿ ಪ್ರಜ್ವಲ್ ಹಾಜರಿದ್ದರು.</p>.<p>ಗಾನವಿ ಕಾರ್ಯಕ್ರಮ ನಿರೂಪಿಸಿದರು. ಅನನ್ಯ ಪಂಚಾಂಗ ಓದಿದರು. ಆದಿತ್ಯ ಪ್ರಾರ್ಥಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1726868379</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ಪಟ್ಟಣದ ಅಗ್ರಹಾರದ ಬ್ರಾಹ್ಮಣ ಮಹಾಸಭಾ ಭವನದಲ್ಲಿ ಭಾನುವಾರ ರಾಗ ಮಯೂರಿ ಅಕಾಡೆಮಿಯಿಂದ ಕಲಾಯನ-9 ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಂಗಭೂಮಿ ಕಲಾವಿದೆ ಅರ್ಪಿತಾ ಚೊಕ್ಕಾಡಿ, ಕಲಾವಿದರು ತಾವು ಕಲಿತ ಕಲೆಯನ್ನು ಎಂದಿಗೂ ನಿಲ್ಲಿಸಬಾರದು. ಕಲೆ ಎಂಬುದು ಸಾಗರದ ಅಲೆಯಂತೆ. ದೊರೆತ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.</p>.<p>ರಾಗಮಯೂರಿ ಅಕಾಡೆಮಿಯ ಭರತನಾಟ್ಯ ಕಲಾವಿದೆ ಧನ್ಯಶ್ರೀ ಮಾತನಾಡಿ, ರಾಗ ಮಯೂರಿ ಅಕಾಡೆಮಿಯಲ್ಲಿ ಸಂಗೀತ, ಭರತ ನಾಟ್ಯ ಕಲಿತ ವಿದ್ಯಾರ್ಥಿಗಳು ದೊಡ್ಡ ಊರುಗಳಲ್ಲಿ ಪ್ರದರ್ಶನ ಮಾಡಿ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ ಎಂದರು.</p>.<p>ಭರತ ನಾಟ್ಯ ಹಾಗೂ ಸಂಗೀತದಲ್ಲಿ ಜೂನಿಯರ್ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಂದ ಭರತ ನಾಟ್ಯ ಪ್ರದರ್ಶನ ನಡೆಯಿತು.</p>.<p>ಮಯೂರಿ ಅಕಾಡೆಮಿ ಸಂಗೀತ ನಿರ್ದೇಶಕಿ ಅಂಕಿತ ಪ್ರಜ್ವಲ್ ಅವರಿಂದ ನಟುವಾಂಗ, ಹರ್ಷಿತ ಹಾಗೂ ಸಂಪ್ರಿಯ ಅವರಿಂದ ಹಾಡುಗಾರಿಕೆ ನಡೆಯಿತು ಮೃದಂಗದಲ್ಲಿ ಅರವಿಂದ ಹೊಳ್ಳ, ವಯೋಲಿನ್ನಲ್ಲಿ ಮಧು ಮರಳಿ ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಅಕಾಡೆಮಿಯ ಕಾರ್ಯದರ್ಶಿ ಪ್ರಜ್ವಲ್ ಹಾಜರಿದ್ದರು.</p>.<p>ಗಾನವಿ ಕಾರ್ಯಕ್ರಮ ನಿರೂಪಿಸಿದರು. ಅನನ್ಯ ಪಂಚಾಂಗ ಓದಿದರು. ಆದಿತ್ಯ ಪ್ರಾರ್ಥಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1726868379</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>