<p>ಬೆಂಗಳೂರಿನ ರಾಜಾಜಿನಗರ 2ನೇ ಹಂತದಲ್ಲಿರುವ ಶಿವಶಕ್ತಿ ನೃತ್ಯ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ತುಂಬಿರುವ ಪ್ರಯುಕ್ತ ರಜತ ಮಹೋತ್ಸವ ಸಮಾರಂಭವನ್ನು ಇದೇ ಏಪ್ರಿಲ್ 25ರಂದು ಶುಕ್ರವಾರ ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ.</p><p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಡಾ. ಸಿ.ಎನ್.ಅಶ್ವಥ್ ನಾರಾಯಣ ಅಧ್ಯಕ್ಷತೆ ವಹಿಸುವರು.</p><p>ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಟ.ಶ್ರೀನಿವಾಸ್ ಅತಿಥಿಗಳಾಗಿ ಪಾಲ್ಗೊಳ್ಳುವರು. ಚಲನಚಿತ್ರ ನಿರ್ಮಾಪಕರಾದ ಡಿ.ಸುರೇಶ್ ಗೌಡ , ಹಿರಿಯ ಪತ್ರಕರ್ತರಾದ ಎಸ್.ಆರ್. ಆರಾಧ್ಯ ಉಪಸ್ಥಿತರಿರುವರು.</p><p>ಕಲಾಯೋಗಿ ಗುರು ಪುಲಿಕೇಶಿ ಕಸ್ತೂರಿ, ಸಂಸ್ಕೃತಿ ಚಿಂತಕರಾದ ಪ್ರೊ. ಎಂ. ಕೃಷ್ಣೇಗೌಡ ಹಾಗೂ ಕಲಾ ನಿರ್ದೇಶಕರಾದ ವಿದ್ವಾನ್ ಹರೀಶ್ ರಾಮನ್ ಭಾಗವಹಿಸಲಿದ್ದಾರೆ. ಶಿವಶಕ್ತಿ ನೃತ್ಯ ಶಾಲೆಯ ಸಂಸ್ಥಾಪಕ ನಿರ್ದೇಶಕರಾ ಕೆ.ಆರ್.ಗುಣವತಿ ಅವರ ಶಿಷ್ಯ ವೃಂದದಿಂದ ಶಿವನಾಮಾಮೃತ ನೃತ್ಯ ರೂಪಕ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ರಾಜಾಜಿನಗರ 2ನೇ ಹಂತದಲ್ಲಿರುವ ಶಿವಶಕ್ತಿ ನೃತ್ಯ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ತುಂಬಿರುವ ಪ್ರಯುಕ್ತ ರಜತ ಮಹೋತ್ಸವ ಸಮಾರಂಭವನ್ನು ಇದೇ ಏಪ್ರಿಲ್ 25ರಂದು ಶುಕ್ರವಾರ ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ.</p><p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಡಾ. ಸಿ.ಎನ್.ಅಶ್ವಥ್ ನಾರಾಯಣ ಅಧ್ಯಕ್ಷತೆ ವಹಿಸುವರು.</p><p>ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಟ.ಶ್ರೀನಿವಾಸ್ ಅತಿಥಿಗಳಾಗಿ ಪಾಲ್ಗೊಳ್ಳುವರು. ಚಲನಚಿತ್ರ ನಿರ್ಮಾಪಕರಾದ ಡಿ.ಸುರೇಶ್ ಗೌಡ , ಹಿರಿಯ ಪತ್ರಕರ್ತರಾದ ಎಸ್.ಆರ್. ಆರಾಧ್ಯ ಉಪಸ್ಥಿತರಿರುವರು.</p><p>ಕಲಾಯೋಗಿ ಗುರು ಪುಲಿಕೇಶಿ ಕಸ್ತೂರಿ, ಸಂಸ್ಕೃತಿ ಚಿಂತಕರಾದ ಪ್ರೊ. ಎಂ. ಕೃಷ್ಣೇಗೌಡ ಹಾಗೂ ಕಲಾ ನಿರ್ದೇಶಕರಾದ ವಿದ್ವಾನ್ ಹರೀಶ್ ರಾಮನ್ ಭಾಗವಹಿಸಲಿದ್ದಾರೆ. ಶಿವಶಕ್ತಿ ನೃತ್ಯ ಶಾಲೆಯ ಸಂಸ್ಥಾಪಕ ನಿರ್ದೇಶಕರಾ ಕೆ.ಆರ್.ಗುಣವತಿ ಅವರ ಶಿಷ್ಯ ವೃಂದದಿಂದ ಶಿವನಾಮಾಮೃತ ನೃತ್ಯ ರೂಪಕ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>