<p>ಸಿದ್ದಾಪುರ: ‘ಯಕ್ಷಗಾನ ಕಲೆ ಕೇವಲ ಮನರಂಜನೆಗೆ ಸೀಮಿತವಾದ ಕಲೆಯಲ್ಲ. ಮನರಂಜನೆಯ ಜೊತೆಗೆ ಅಗಾಧ ಜ್ಞಾನಭಂಡಾರ ಉಣಬಡಿಸುವ ಪರಮಾತ್ಮನಿಗೆ ಸಲ್ಲಿಸುವ ಕಲಾಸೇವೆ’ ಎಂದು ಉದ್ಯಮಿ ಅನಂತಮೂರ್ತಿ ಹೆಗಡೆ ಶಿರಸಿ ಹೇಳಿದರು.</p>.<p>ತಾಲ್ಲೂಕಿನ ದೊಡ್ಮನೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ದೊಡ್ಮನೆ ಯಕ್ಷೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಲಾಸಂಘಟನೆ ಸುಲಭ ಸಾಧ್ಯವಲ್ಲ. ಅದೊಂದು ಕ್ಲಿಷ್ಟಕರ ಕೆಲಸ. ದೇಶಕಂಡ ಅಪ್ರತಿಮ ಮುತ್ಸದ್ಧಿ ರಾಮಕೃಷ್ಣ ಹೆಗಡೆಯವರು ಜನಿಸಿದ ದೊಡ್ಮನೆ ಊರಿನಲ್ಲಿ ಯಕ್ಷೋತ್ಸವ ನಡೆಯುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಮಾತನಾಡಿ, ಯಕ್ಷಗಾನವು ನಮ್ಮ ಸಂಸ್ಕೃತಿಯ ಬೇರು. ಸಮಾಜಕ್ಕೆ ಪೂರಕವಾದುದನ್ನು ಯಕ್ಷಗಾನ ಕಲೆ ನೀಡುತ್ತದೆ’ ಎಂದರು.</p>.<p>ಯಕ್ಷಗಾನ ಕಲಾ ಅಕಾಡೆಮಿ ಸದಸ್ಯ ವಿದ್ಯಾಧರರಾವ್ ಜಲವಳ್ಳಿ, ತಾಲ್ಲೂಕು ಭಾರತ ಸೇವಾದಳದ ಅಧ್ಯಕ್ಷ ಕೆಕ್ಕಾರ ನಾಗರಾಜ ಭಟ್ಟ ಮಾತನಾಡಿದರು.</p>.<p>ಯಕ್ಷಗಾನ ಕಲಾರಂಗದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಹೆಗಡೆ ಚಪ್ಪರಮನೆ ದಂಪತಿಗಳನ್ನು ಸನ್ಮಾನಿಸಲಾಯಿತು.</p>.<p>ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಶಶಿಭೂಷಣ ಹೆಗಡೆ ಮಾತನಾಡಿದರು. ದರ್ಶನ ಹೆಗಡೆ, ಗೌರೀಶ ಹೆಗಡೆ, ಶ್ರೀಧರ ಭಟ್ಟ ಗಡಿಹಿತ್ಲು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-20-2087741224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ‘ಯಕ್ಷಗಾನ ಕಲೆ ಕೇವಲ ಮನರಂಜನೆಗೆ ಸೀಮಿತವಾದ ಕಲೆಯಲ್ಲ. ಮನರಂಜನೆಯ ಜೊತೆಗೆ ಅಗಾಧ ಜ್ಞಾನಭಂಡಾರ ಉಣಬಡಿಸುವ ಪರಮಾತ್ಮನಿಗೆ ಸಲ್ಲಿಸುವ ಕಲಾಸೇವೆ’ ಎಂದು ಉದ್ಯಮಿ ಅನಂತಮೂರ್ತಿ ಹೆಗಡೆ ಶಿರಸಿ ಹೇಳಿದರು.</p>.<p>ತಾಲ್ಲೂಕಿನ ದೊಡ್ಮನೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ದೊಡ್ಮನೆ ಯಕ್ಷೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಲಾಸಂಘಟನೆ ಸುಲಭ ಸಾಧ್ಯವಲ್ಲ. ಅದೊಂದು ಕ್ಲಿಷ್ಟಕರ ಕೆಲಸ. ದೇಶಕಂಡ ಅಪ್ರತಿಮ ಮುತ್ಸದ್ಧಿ ರಾಮಕೃಷ್ಣ ಹೆಗಡೆಯವರು ಜನಿಸಿದ ದೊಡ್ಮನೆ ಊರಿನಲ್ಲಿ ಯಕ್ಷೋತ್ಸವ ನಡೆಯುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಮಾತನಾಡಿ, ಯಕ್ಷಗಾನವು ನಮ್ಮ ಸಂಸ್ಕೃತಿಯ ಬೇರು. ಸಮಾಜಕ್ಕೆ ಪೂರಕವಾದುದನ್ನು ಯಕ್ಷಗಾನ ಕಲೆ ನೀಡುತ್ತದೆ’ ಎಂದರು.</p>.<p>ಯಕ್ಷಗಾನ ಕಲಾ ಅಕಾಡೆಮಿ ಸದಸ್ಯ ವಿದ್ಯಾಧರರಾವ್ ಜಲವಳ್ಳಿ, ತಾಲ್ಲೂಕು ಭಾರತ ಸೇವಾದಳದ ಅಧ್ಯಕ್ಷ ಕೆಕ್ಕಾರ ನಾಗರಾಜ ಭಟ್ಟ ಮಾತನಾಡಿದರು.</p>.<p>ಯಕ್ಷಗಾನ ಕಲಾರಂಗದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಹೆಗಡೆ ಚಪ್ಪರಮನೆ ದಂಪತಿಗಳನ್ನು ಸನ್ಮಾನಿಸಲಾಯಿತು.</p>.<p>ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಶಶಿಭೂಷಣ ಹೆಗಡೆ ಮಾತನಾಡಿದರು. ದರ್ಶನ ಹೆಗಡೆ, ಗೌರೀಶ ಹೆಗಡೆ, ಶ್ರೀಧರ ಭಟ್ಟ ಗಡಿಹಿತ್ಲು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-20-2087741224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>