<p>ಶಿರಸಿ: 70ರ ಇಳಿವಯಸ್ಸಿನಲ್ಲೂ ಮದ್ದಳೆ ವಾದನದಲ್ಲಿ ಮಂತ್ರಮುಗ್ಧಗೊಳಿಸುತ್ತಿರುವ ಯಕ್ಷಗಾನದ ಹಿರಿಯ ಮದ್ದಳೆ ಕಲಾವಿದ ಶಂಕರ ಭಾಗವತ ಯಲ್ಲಾಪುರ ದಂಪತಿಯನ್ನು ನಗರದಲ್ಲಿ ಶನಿವಾರ ಅದ್ದೂರಿಯಾಗಿ ಸನ್ಮಾನಿಸಲಾಯಿತು.</p>.<p>ನಗರದ ಪೊಲೀಸ್ ಮೈದಾನದಲ್ಲಿ ಜನಹಿತ ಸೇವಾ ಫೌಂಡೇಷನ್ ಹಾಗೂ ಇಕೊಕೇರ್ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಈ ಗೌರವ ಸಮರ್ಪಿಸಲಾಯಿತು. ನಾದಶಂಕರ ಶಂಕರ ಭಾಗವತ ದಂಪತಿಗೆ ಶಾಲು, ಸ್ಮರಣಿಕೆ ಹಾಗೂ ₹21 ಸಾವಿರ ನಗದು ಒಳಗೊಂಡ ಹಮ್ಮಿಣಿ ನೀಡಿ ಗೌರವಿಸಲಾಯಿತು.</p>.<p>ನಿವೃತ್ತ ಪ್ರಾಚಾರ್ಯ ವಿದ್ವಾನ್ ನರಸಿಂಹ ಭಟ್, ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ವತ್ಸಲಾ ಹೆಗಡೆ, ಸಾಮಾಜಿಕ ಕಾರ್ಯಕರ್ತ ಎಸ್.ಕೆ.ಭಾಗವತ ಹಾಗೂ ಇತರರು ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಶಂಕರ ಭಾಗವತ, ತಮ್ಮ ಕಲಾಜೀವನದ ಹಾದಿಯನ್ನು ಸ್ಮರಿಸುತ್ತಾ, ಸುಸಂಸ್ಕೃತ ಯಕ್ಷಗಾನ ಕಲೆಯ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ’ ಎಂದರು.</p>.<p>ಅಂಕೋಲಾ ತಾಲ್ಲೂಕಿನ ಕುಗ್ರಾಮದ ಬಡ ಕುಟುಂಬಕ್ಕೆ ಸಹಾಯ ಮಾಡುವ ಆಸರೆ ಕಾರ್ಯಕ್ರಮದ ಅಂಗವಾಗಿ ಈ ಯಕ್ಷಗಾನ ಆಯೋಜಿಸಲಾಗಿತ್ತು. ನಂತರ ಪೆರ್ಡೂರು ಮೇಳದ ಕಲಾವಿದರಿಂದ ಕೃಷ್ಣ–ಕುಚೇಲ ಮತ್ತು ಮಾಯಾ ಮೃಗಾವತಿ ಪ್ರಸಂಗಗಳು ಪ್ರದರ್ಶನಗೊಂಡವು. ಗಿರಿಧರ ಕಬ್ನಳ್ಳಿ ಸ್ವಾಗತಿಸಿ, ಸನ್ಮಾನ ಪತ್ರ ವಾಚಿಸಿದರು. ಲೋಕೇಶ ಹೆಗಡೆ ವಂದಿಸಿದರು. ಕಡೆಮನೆ ಮಹೇಶ ಭಟ್, ಜಗದೀಶ ನಾಯಕ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-20-1078694599</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: 70ರ ಇಳಿವಯಸ್ಸಿನಲ್ಲೂ ಮದ್ದಳೆ ವಾದನದಲ್ಲಿ ಮಂತ್ರಮುಗ್ಧಗೊಳಿಸುತ್ತಿರುವ ಯಕ್ಷಗಾನದ ಹಿರಿಯ ಮದ್ದಳೆ ಕಲಾವಿದ ಶಂಕರ ಭಾಗವತ ಯಲ್ಲಾಪುರ ದಂಪತಿಯನ್ನು ನಗರದಲ್ಲಿ ಶನಿವಾರ ಅದ್ದೂರಿಯಾಗಿ ಸನ್ಮಾನಿಸಲಾಯಿತು.</p>.<p>ನಗರದ ಪೊಲೀಸ್ ಮೈದಾನದಲ್ಲಿ ಜನಹಿತ ಸೇವಾ ಫೌಂಡೇಷನ್ ಹಾಗೂ ಇಕೊಕೇರ್ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಈ ಗೌರವ ಸಮರ್ಪಿಸಲಾಯಿತು. ನಾದಶಂಕರ ಶಂಕರ ಭಾಗವತ ದಂಪತಿಗೆ ಶಾಲು, ಸ್ಮರಣಿಕೆ ಹಾಗೂ ₹21 ಸಾವಿರ ನಗದು ಒಳಗೊಂಡ ಹಮ್ಮಿಣಿ ನೀಡಿ ಗೌರವಿಸಲಾಯಿತು.</p>.<p>ನಿವೃತ್ತ ಪ್ರಾಚಾರ್ಯ ವಿದ್ವಾನ್ ನರಸಿಂಹ ಭಟ್, ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ವತ್ಸಲಾ ಹೆಗಡೆ, ಸಾಮಾಜಿಕ ಕಾರ್ಯಕರ್ತ ಎಸ್.ಕೆ.ಭಾಗವತ ಹಾಗೂ ಇತರರು ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಶಂಕರ ಭಾಗವತ, ತಮ್ಮ ಕಲಾಜೀವನದ ಹಾದಿಯನ್ನು ಸ್ಮರಿಸುತ್ತಾ, ಸುಸಂಸ್ಕೃತ ಯಕ್ಷಗಾನ ಕಲೆಯ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ’ ಎಂದರು.</p>.<p>ಅಂಕೋಲಾ ತಾಲ್ಲೂಕಿನ ಕುಗ್ರಾಮದ ಬಡ ಕುಟುಂಬಕ್ಕೆ ಸಹಾಯ ಮಾಡುವ ಆಸರೆ ಕಾರ್ಯಕ್ರಮದ ಅಂಗವಾಗಿ ಈ ಯಕ್ಷಗಾನ ಆಯೋಜಿಸಲಾಗಿತ್ತು. ನಂತರ ಪೆರ್ಡೂರು ಮೇಳದ ಕಲಾವಿದರಿಂದ ಕೃಷ್ಣ–ಕುಚೇಲ ಮತ್ತು ಮಾಯಾ ಮೃಗಾವತಿ ಪ್ರಸಂಗಗಳು ಪ್ರದರ್ಶನಗೊಂಡವು. ಗಿರಿಧರ ಕಬ್ನಳ್ಳಿ ಸ್ವಾಗತಿಸಿ, ಸನ್ಮಾನ ಪತ್ರ ವಾಚಿಸಿದರು. ಲೋಕೇಶ ಹೆಗಡೆ ವಂದಿಸಿದರು. ಕಡೆಮನೆ ಮಹೇಶ ಭಟ್, ಜಗದೀಶ ನಾಯಕ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-20-1078694599</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>