<p>ಶ್ರೀನಿವಾಸಪುರ: ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ ಈಶ ನಾಟ್ಯಕಲಾ ಅಕಾಡೆಮಿ ಹಾಗೂ ಈಶ ನಾಟ್ಯಕಲಾ ಸೇವಾ ಟ್ರಸ್ಟ್ನಿಂದ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಭರತನಾಟ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.</p>.<p>ವೈದ್ಯಾಧಿಕಾರಿ ಡಾ.ವೈ.ವಿ.ವೆಂಕಟಾಚಲ ಮಾತನಾಡಿ, ‘ಪೋಷಕರು ತಮ್ಮ ಮಕ್ಕಳನ್ನು ನೃತ್ಯ, ಸಂಗೀತ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಅವರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕರಿಸಬೇಕು. ಈ ಚಟುವಟಿಕೆಗಳು ಮಕ್ಕಳಲ್ಲಿ ಓದಿನ ಹೊರೆಯಿಂದ ಉಂಟಾಗಬಹುದಾದ ಬೇಸರವನ್ನು ಕಳೆಯಲು ನೆರವಾಗುತ್ತವೆ’ ಎಂದು ಹೇಳಿದರು.</p>.<p>ಜಿಲ್ಲಾ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮಾಯಾ ಬಾಲಚಂದ್ರ, ‘ಭರತನಾಟ್ಯ ಭಾರತದ ಕೊಡುಗೆ. ಅತ್ಯಂತ ಪ್ರಾಚೀನ ಶಾಸ್ತ್ರೀಯ ಕಲೆಯಾದ ಭರತನಾಟ್ಯ ಸಾವಿರಾರು ವರ್ಷಗಳಿಂದ ಉಳಿದು ಬಂದಿದೆ. ಅದು ನೃತ್ಯಕ್ಕೆ ಇರುವ ಶಕ್ತಿಯ ಧ್ಯೋತಕ ’ ಎಂದರು.</p>.<p>ಅಕಾಡೆಮಿ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶನ ನೀಡಿದರು. ಗಾಯಕ ವೆಂಕಟೇಶ್ ಕನ್ನಡ ಗೀತೆ ಹಾಡಿದರು. ಸಂಗೀತ ಶಿಕ್ಷಕಿ ಪ್ರತೀಶ ನರೇಶ್ ಅವರನ್ನು ಸನ್ಮಾನಿಸಿಸಲಾಯಿತು.</p>.<p>ಸರ್ಕಾರಿ ಪ್ರಥಮದರ್ಜೆ ಕಾಲೇಜಿ ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಮೃತ್ಯುಂಜಯ, ಸಾಹಿತಿ ಆರ್.ಚೌಡರೆಡ್ಡಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶಿವಾನಂದ, ವಿ.ನಿಶಾಂತ್, ವೆಂಕಟರೆಡ್ಡಿ, ನೃತ್ಯ ಶಿಕ್ಷಕಿ ಪ್ರತೀಶ, ನರೇಶ್, ರೂಪಾ, ವೆಂಕಟೇಶ್, ನಾರಾಯಸ್ವಾಮಿ, ಎನ್.ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-18-300070432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ ಈಶ ನಾಟ್ಯಕಲಾ ಅಕಾಡೆಮಿ ಹಾಗೂ ಈಶ ನಾಟ್ಯಕಲಾ ಸೇವಾ ಟ್ರಸ್ಟ್ನಿಂದ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಭರತನಾಟ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.</p>.<p>ವೈದ್ಯಾಧಿಕಾರಿ ಡಾ.ವೈ.ವಿ.ವೆಂಕಟಾಚಲ ಮಾತನಾಡಿ, ‘ಪೋಷಕರು ತಮ್ಮ ಮಕ್ಕಳನ್ನು ನೃತ್ಯ, ಸಂಗೀತ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಅವರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕರಿಸಬೇಕು. ಈ ಚಟುವಟಿಕೆಗಳು ಮಕ್ಕಳಲ್ಲಿ ಓದಿನ ಹೊರೆಯಿಂದ ಉಂಟಾಗಬಹುದಾದ ಬೇಸರವನ್ನು ಕಳೆಯಲು ನೆರವಾಗುತ್ತವೆ’ ಎಂದು ಹೇಳಿದರು.</p>.<p>ಜಿಲ್ಲಾ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮಾಯಾ ಬಾಲಚಂದ್ರ, ‘ಭರತನಾಟ್ಯ ಭಾರತದ ಕೊಡುಗೆ. ಅತ್ಯಂತ ಪ್ರಾಚೀನ ಶಾಸ್ತ್ರೀಯ ಕಲೆಯಾದ ಭರತನಾಟ್ಯ ಸಾವಿರಾರು ವರ್ಷಗಳಿಂದ ಉಳಿದು ಬಂದಿದೆ. ಅದು ನೃತ್ಯಕ್ಕೆ ಇರುವ ಶಕ್ತಿಯ ಧ್ಯೋತಕ ’ ಎಂದರು.</p>.<p>ಅಕಾಡೆಮಿ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶನ ನೀಡಿದರು. ಗಾಯಕ ವೆಂಕಟೇಶ್ ಕನ್ನಡ ಗೀತೆ ಹಾಡಿದರು. ಸಂಗೀತ ಶಿಕ್ಷಕಿ ಪ್ರತೀಶ ನರೇಶ್ ಅವರನ್ನು ಸನ್ಮಾನಿಸಿಸಲಾಯಿತು.</p>.<p>ಸರ್ಕಾರಿ ಪ್ರಥಮದರ್ಜೆ ಕಾಲೇಜಿ ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಮೃತ್ಯುಂಜಯ, ಸಾಹಿತಿ ಆರ್.ಚೌಡರೆಡ್ಡಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶಿವಾನಂದ, ವಿ.ನಿಶಾಂತ್, ವೆಂಕಟರೆಡ್ಡಿ, ನೃತ್ಯ ಶಿಕ್ಷಕಿ ಪ್ರತೀಶ, ನರೇಶ್, ರೂಪಾ, ವೆಂಕಟೇಶ್, ನಾರಾಯಸ್ವಾಮಿ, ಎನ್.ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-18-300070432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>