<p>ಬೆಂಗಳೂರು: ಪಂಡಿತ್ ನಂದಕುಮಾರ್ ಕುರುಡಿ ಅಮೃತ ಮಹೋತ್ಸವ ಸಮಿತಿ ನೀಡುವ ‘ಲಯ ಸಾರ್ವಭೌಮ ಪ್ರಶಸ್ತಿ’ಗೆ ತಬಲಾ ವಾದಕ ರವೀಂದ್ರ ಯಾವಗಲ್ ಆಯ್ಕೆಯಾಗಿದ್ದಾರೆ.</p>.<p>ಹಿಂದೂಸ್ತಾನಿ ಗಾಯಕ ನಂದಕುಮಾರ್ ಕುರುಡಿ ಅವರ 75ನೇ ಜನ್ಮದಿನೋತ್ಸವದ ಅಂಗವಾಗಿ ಸಮಿತಿಯು ಇದೇ 15ರಂದು ಸಂಜೆ 5 ಗಂಟೆಗೆ ಜಯನಗರದ 8ನೇ ಬ್ಲಾಕ್ನಲ್ಲಿರುವ ಜಯರಾಮ ಸೇವಾ ಮಂಡಳಿಯಲ್ಲಿ ನಾದಾಮೃತ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸಂಗೀತ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<p>ತಬಲಾ ವಾದಕರಾದ ಸತೀಶ್ ಹಂಪಿಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಪ್ತಕ ಸಂಸ್ಥೆಯ ಸಂಸ್ಥಾಪಕ ಜಿ.ಎಸ್. ಹೆಗಡೆ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.</p>.<p>ಬಳಿಕ ನಡೆಯುವ ಸಂಗೀತ ಕಛೇರಿಯಲ್ಲಿ ನಂದಕುಮಾರ್ ಕುರುಡಿ ಗಾಯನ ಪ್ರಸ್ತುತಪಡಿಸಲಿದ್ದಾರೆ. ತಬಲಾದಲ್ಲಿ ಎಂ. ನಾಗೇಶ್, ಹಾರ್ಮೋನಿಯಂನಲ್ಲಿ ವ್ಯಾಸಮೂರ್ತಿ ಕಟ್ಟಿ ಸಾಥ್ ನೀಡಲಿದ್ದಾರೆ. ರವೀಂದ್ರ ಯಾವಗಲ್ ಅವರಿಂದ ತಬಲಾ ಹಾಗೂ ರಂಜನ್ ಕುಮಾರ್ ಬೇವೂರ್ ಅವರಿಂದ ಪಿಟೀಲು ವಾದನ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-180809387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪಂಡಿತ್ ನಂದಕುಮಾರ್ ಕುರುಡಿ ಅಮೃತ ಮಹೋತ್ಸವ ಸಮಿತಿ ನೀಡುವ ‘ಲಯ ಸಾರ್ವಭೌಮ ಪ್ರಶಸ್ತಿ’ಗೆ ತಬಲಾ ವಾದಕ ರವೀಂದ್ರ ಯಾವಗಲ್ ಆಯ್ಕೆಯಾಗಿದ್ದಾರೆ.</p>.<p>ಹಿಂದೂಸ್ತಾನಿ ಗಾಯಕ ನಂದಕುಮಾರ್ ಕುರುಡಿ ಅವರ 75ನೇ ಜನ್ಮದಿನೋತ್ಸವದ ಅಂಗವಾಗಿ ಸಮಿತಿಯು ಇದೇ 15ರಂದು ಸಂಜೆ 5 ಗಂಟೆಗೆ ಜಯನಗರದ 8ನೇ ಬ್ಲಾಕ್ನಲ್ಲಿರುವ ಜಯರಾಮ ಸೇವಾ ಮಂಡಳಿಯಲ್ಲಿ ನಾದಾಮೃತ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸಂಗೀತ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<p>ತಬಲಾ ವಾದಕರಾದ ಸತೀಶ್ ಹಂಪಿಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಪ್ತಕ ಸಂಸ್ಥೆಯ ಸಂಸ್ಥಾಪಕ ಜಿ.ಎಸ್. ಹೆಗಡೆ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.</p>.<p>ಬಳಿಕ ನಡೆಯುವ ಸಂಗೀತ ಕಛೇರಿಯಲ್ಲಿ ನಂದಕುಮಾರ್ ಕುರುಡಿ ಗಾಯನ ಪ್ರಸ್ತುತಪಡಿಸಲಿದ್ದಾರೆ. ತಬಲಾದಲ್ಲಿ ಎಂ. ನಾಗೇಶ್, ಹಾರ್ಮೋನಿಯಂನಲ್ಲಿ ವ್ಯಾಸಮೂರ್ತಿ ಕಟ್ಟಿ ಸಾಥ್ ನೀಡಲಿದ್ದಾರೆ. ರವೀಂದ್ರ ಯಾವಗಲ್ ಅವರಿಂದ ತಬಲಾ ಹಾಗೂ ರಂಜನ್ ಕುಮಾರ್ ಬೇವೂರ್ ಅವರಿಂದ ಪಿಟೀಲು ವಾದನ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-180809387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>