ಪಂಡಿತ್ ವೆಂಕಟೇಶ್ ಕುಮಾರ್ ಅವರು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪ್ರತಿಭೆ. ಅವರು ಪುಣ್ಯಾಶ್ರಮದಲ್ಲಿ ಸಂಗೀತ ಕಲಿತು ಹೊರಬಂದಾಗ ಅವರ ಮುಂದೆ ಪ್ರಶ್ನಾರ್ಥಕ ಚಿನ್ಹೆ ಇತ್ತು. ಮುಂದೇನೂ ಮಾಡಬೇಕು, ಭವಿಷ್ಯ ಹೇಗೆ ಎಂಬ ಪ್ರಶ್ನೆ ಕಾಡುತ್ತದೆ. ಬೇರೆಬೇರೆ ಕೆಲಸ ಹುಡುಕುತ್ತಾರೆ, ಅರ್ಜಿ ಹಾಕುತ್ತಾರೆ. ಮುಖ್ಯವಾಗಿ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೆಬಲ್ ಕೆಲಸಕ್ಕೆ ಅರ್ಜಿ ಹಾಕುತ್ತಾರೆ. ಸಂದರ್ಶನ ಬರುತ್ತೆ. ಪೊಲೀಸ್ ಕೆಲಸಕ್ಕೆ ಹೋಗೋದು ಎಂದು ನಿರ್ಧಾರ ಮಾಡುತ್ತಾರೆ. ಅದರ ನಡುವೆ ವಿಜಯ ಮಹಾಂತೇಶ ಕಾಲೇಜಿನ ಸ್ಥಾಪಕ ಟಿ.ಪಿ. ಅಕ್ತಿ ಅವರಿಗೆ ಈ ವಿಚಾರ ತಿಳಿಸುತ್ತಾರೆ. ಅವರು ಅಸಮಾಧಾನ ವ್ಯಕ್ತಪಡಿಸಿ ಕಾನ್ಸ್ಟೆಬಲ್ ಕೆಲಸಕ್ಕೆ ಹೋಗದಂತೆ ತಡೆಯುತ್ತಾರೆ. ಅದು ಅವರ ಬದುಕಿನ ಟರ್ನಿಂಗ್ ಪಾಯಿಂಟ್ ಆಗುತ್ತದೆ.