<p>ಮಂಡ್ಯ: ‘ಪ್ರಸ್ತುತದಲ್ಲಿ ಎಲೆಮರೆಕಾಯಿ ಅಂತಿರುವ ಗಾಯಕರನ್ನು ಗುರುತಿಸುವ ಮೂಲಕ ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದು ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಶಿವಮೂರ್ತಿ ಕೀಲಾರ ಅಭಿಪ್ರಾಯಪಟ್ಟರು.</p>.<p>ನಗರದ ಅಭಿನವ ಭಾರತಿ ವಿದ್ಯಾಕೇಂದ್ರ ಆವರಣದಲ್ಲಿ ಜಿಲ್ಲಾ ಗಾಯಕರಿಗಾಗಿ ಭಾನುವಾರ ನಡೆದ ‘ಅಭಿನವ ಸರಿಗಮಪ-ಅನಂತ ಸಂಗೀತಯಾನ-2026’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅನಂತಕುಮಾರ ಸ್ವಾಮೀಜಿ ಅವರ ಆಶಯ ಮತ್ತು ಆಶೀರ್ವಾದಿಂದ ಜಿಲ್ಲೆಯ ಮಕ್ಕಳಲ್ಲಿರುವ ಗಾಯನ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ಸಂಗೀತ ಕ್ಷೇತ್ರವು ದೊಡ್ಡಮಟ್ಟದಲ್ಲಿ ಬೆಳೆಯುತ್ತಿದೆ. ಪ್ರತಿಭೆಗಳ ಅಗತ್ಯವಿದ್ದು, ಮುಂದಿನ ಪೀಳೆಗೆಗೆ ಸಂಗೀತದ ಅಭಿರುಚಿ ಉಳಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.</p>.<p>ಪ್ರತಿಭಾಂಜಲಿ ಸುಗಮ ಸಂಗೀತ ಆಕಾಡೆಮಿ ಅಧ್ಯಕ್ಷ ಪ್ರೊ.ಡೇವಿಡ್ ಮಾತನಾಡಿ, ಈ ಸ್ಪರ್ಧೆಯಲ್ಲಿ 120ಕ್ಕೂ ಹೆಚ್ಚು ಗಾಯನ ಸ್ಪರ್ಧಾರ್ಥಿಗಳು ಬಾಗಿಯಾಗಿದ್ದು, 17 ಕಿರಿಯ ಹಾಗೂ 15 ಹಿರಿಯರ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಮುಂದಿನ ವಾರದಲ್ಲಿ ಸೆಮಿಪೈನಲ್ ಮತ್ತು ಪೈನಲ್ ನಡೆಯಲಿದೆ ಎಂದರು.</p>.<p>ತೀರ್ಪುಗಾರರಿಂದ ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ್ದ ಗಾಯಕರ ಆಡಿಷನ್ನಲ್ಲಿ ಮೊದಲ ಹಂತಕ್ಕೆ ಆಯ್ಕೆಯಾದವರಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಯಿತು.</p>.<p>ತೀರ್ಪುಗಾರರಾದ ಧನುಶ್ ಜಗದೀಶ್, ದಿವ್ಯಾ ಸಚ್ಚಿದಾನಂದ, ಪ್ರೊ.ಡೇವಿಡ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-40-1713511681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಪ್ರಸ್ತುತದಲ್ಲಿ ಎಲೆಮರೆಕಾಯಿ ಅಂತಿರುವ ಗಾಯಕರನ್ನು ಗುರುತಿಸುವ ಮೂಲಕ ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದು ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಶಿವಮೂರ್ತಿ ಕೀಲಾರ ಅಭಿಪ್ರಾಯಪಟ್ಟರು.</p>.<p>ನಗರದ ಅಭಿನವ ಭಾರತಿ ವಿದ್ಯಾಕೇಂದ್ರ ಆವರಣದಲ್ಲಿ ಜಿಲ್ಲಾ ಗಾಯಕರಿಗಾಗಿ ಭಾನುವಾರ ನಡೆದ ‘ಅಭಿನವ ಸರಿಗಮಪ-ಅನಂತ ಸಂಗೀತಯಾನ-2026’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅನಂತಕುಮಾರ ಸ್ವಾಮೀಜಿ ಅವರ ಆಶಯ ಮತ್ತು ಆಶೀರ್ವಾದಿಂದ ಜಿಲ್ಲೆಯ ಮಕ್ಕಳಲ್ಲಿರುವ ಗಾಯನ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ಸಂಗೀತ ಕ್ಷೇತ್ರವು ದೊಡ್ಡಮಟ್ಟದಲ್ಲಿ ಬೆಳೆಯುತ್ತಿದೆ. ಪ್ರತಿಭೆಗಳ ಅಗತ್ಯವಿದ್ದು, ಮುಂದಿನ ಪೀಳೆಗೆಗೆ ಸಂಗೀತದ ಅಭಿರುಚಿ ಉಳಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.</p>.<p>ಪ್ರತಿಭಾಂಜಲಿ ಸುಗಮ ಸಂಗೀತ ಆಕಾಡೆಮಿ ಅಧ್ಯಕ್ಷ ಪ್ರೊ.ಡೇವಿಡ್ ಮಾತನಾಡಿ, ಈ ಸ್ಪರ್ಧೆಯಲ್ಲಿ 120ಕ್ಕೂ ಹೆಚ್ಚು ಗಾಯನ ಸ್ಪರ್ಧಾರ್ಥಿಗಳು ಬಾಗಿಯಾಗಿದ್ದು, 17 ಕಿರಿಯ ಹಾಗೂ 15 ಹಿರಿಯರ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಮುಂದಿನ ವಾರದಲ್ಲಿ ಸೆಮಿಪೈನಲ್ ಮತ್ತು ಪೈನಲ್ ನಡೆಯಲಿದೆ ಎಂದರು.</p>.<p>ತೀರ್ಪುಗಾರರಿಂದ ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ್ದ ಗಾಯಕರ ಆಡಿಷನ್ನಲ್ಲಿ ಮೊದಲ ಹಂತಕ್ಕೆ ಆಯ್ಕೆಯಾದವರಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಯಿತು.</p>.<p>ತೀರ್ಪುಗಾರರಾದ ಧನುಶ್ ಜಗದೀಶ್, ದಿವ್ಯಾ ಸಚ್ಚಿದಾನಂದ, ಪ್ರೊ.ಡೇವಿಡ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-40-1713511681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>