<p>ಮೈಸೂರು: ‘ಡಿಸೆಂಬರ್ನಲ್ಲಿ ಮೈಸೂರು ನಗರದಲ್ಲಿ ಸುಗಮ ಸಂಗೀತ ಶತಮಾನೋತ್ಸವ ಆಚರಿಸಲು ಉದ್ದೇಶಿಸಲಾಗಿದೆ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಕಾರ್ಯಾಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು.</p>.<p>ನಗರದ ಹೂಟಗಳ್ಳಿ ಕೆಎಚ್ಬಿ ಕಾಲೊನಿಯ ಅನಂತೇಶ್ವರ ಭವನದಲ್ಲಿ ಶನಿವಾರ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಎರಡು ದಿನಗಳ ಸುಗಮ ಸಂಗೀತ ಕಲಿಕಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಶತಮಾನೋತ್ಸವ ಸಮಾರಂಭಕ್ಕೆ ಈಗಾಗಲೇ ರಾಜ್ಯ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ₹1 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.</p>.<p>‘ಹತ್ತು ಗೀತೆಗಳನ್ನು ಸಿದ್ಧಪಡಿಸಿ, ರಾಜ್ಯದ 31 ಜಿಲ್ಲೆಗಳಿಗೂ ಸಂಪನ್ಮೂಲ ವ್ಯಕ್ತಿಗಳನ್ನು ಕಳುಹಿಸಿ, ಗಾಯಕ- ಗಾಯಕರನ್ನು ಆಯ್ಕೆ ಮಾಡಲಾಗುವುದು. ಈ ರೀತಿ ಜಿಲ್ಲೆಯಿಂದ ಆಯ್ಕೆಯಾದ ಒಂದು ಸಾವಿರ ಮಂದಿಯನ್ನು ಮೈಸೂರಿಗೆ ಕರೆಸಿ, ಸಾಮೂಹಿಕವಾಗಿ ಗೀತಗಾಯನ ಮಾಡಿಸಲಾಗುವುದು. ಈ ಕಾರ್ಯಕ್ರಮವನ್ನು ಕುವೆಂಪು ಹಾಗೂ ಸಿ.ಅಶ್ವತ್ಥ್ ಅವರಿಗೆ ಸಮರ್ಪಿಸಲಾಗುವುದು’ ಎಂದು ಅವರುತಿಳಿಸಿದರು.</p>.<p>ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ ಮಾನ್ಯತೆಯೊಂದಿಗೆ ಆರಂಭಿಸಿರುವ ಅನಂತೇಶ್ವರ ಟ್ರಸ್ಟ್ ಸುಗಮ ಸಂಗೀತ ಶಾಲೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಚಾಲನೆ ನೀಡಿದರು.</p>.<p>ಮುಖ್ಯ ಅತಿಥಿಯಾಗಿದ್ದ ಚಿಂತಕ ಶಂಕರ್ ದೇವನೂರು ಮಾತನಾಡಿದರು. ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ವಿ.ಭೈರಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಉಡುಪ ಭಾವಗೀತೆ ಹಾಡಿದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕವಿ ಜಯಪ್ಪ ಹೊನ್ನಾಳಿ ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾ ಘಟಕದ ನ.ಗಂಗಾಧರಪ್ಪ, ಸಿರಿಬಾಲು, ಶಿಬಿರದ ಸಂಚಾಲಕರಾದ ಗೀತಲಕ್ಷ್ಮಿ ಕಿಣಿ, ಸುಜಾತಾ ಜಯಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-39-1517013328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಡಿಸೆಂಬರ್ನಲ್ಲಿ ಮೈಸೂರು ನಗರದಲ್ಲಿ ಸುಗಮ ಸಂಗೀತ ಶತಮಾನೋತ್ಸವ ಆಚರಿಸಲು ಉದ್ದೇಶಿಸಲಾಗಿದೆ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಕಾರ್ಯಾಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು.</p>.<p>ನಗರದ ಹೂಟಗಳ್ಳಿ ಕೆಎಚ್ಬಿ ಕಾಲೊನಿಯ ಅನಂತೇಶ್ವರ ಭವನದಲ್ಲಿ ಶನಿವಾರ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಎರಡು ದಿನಗಳ ಸುಗಮ ಸಂಗೀತ ಕಲಿಕಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಶತಮಾನೋತ್ಸವ ಸಮಾರಂಭಕ್ಕೆ ಈಗಾಗಲೇ ರಾಜ್ಯ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ₹1 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.</p>.<p>‘ಹತ್ತು ಗೀತೆಗಳನ್ನು ಸಿದ್ಧಪಡಿಸಿ, ರಾಜ್ಯದ 31 ಜಿಲ್ಲೆಗಳಿಗೂ ಸಂಪನ್ಮೂಲ ವ್ಯಕ್ತಿಗಳನ್ನು ಕಳುಹಿಸಿ, ಗಾಯಕ- ಗಾಯಕರನ್ನು ಆಯ್ಕೆ ಮಾಡಲಾಗುವುದು. ಈ ರೀತಿ ಜಿಲ್ಲೆಯಿಂದ ಆಯ್ಕೆಯಾದ ಒಂದು ಸಾವಿರ ಮಂದಿಯನ್ನು ಮೈಸೂರಿಗೆ ಕರೆಸಿ, ಸಾಮೂಹಿಕವಾಗಿ ಗೀತಗಾಯನ ಮಾಡಿಸಲಾಗುವುದು. ಈ ಕಾರ್ಯಕ್ರಮವನ್ನು ಕುವೆಂಪು ಹಾಗೂ ಸಿ.ಅಶ್ವತ್ಥ್ ಅವರಿಗೆ ಸಮರ್ಪಿಸಲಾಗುವುದು’ ಎಂದು ಅವರುತಿಳಿಸಿದರು.</p>.<p>ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ ಮಾನ್ಯತೆಯೊಂದಿಗೆ ಆರಂಭಿಸಿರುವ ಅನಂತೇಶ್ವರ ಟ್ರಸ್ಟ್ ಸುಗಮ ಸಂಗೀತ ಶಾಲೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಚಾಲನೆ ನೀಡಿದರು.</p>.<p>ಮುಖ್ಯ ಅತಿಥಿಯಾಗಿದ್ದ ಚಿಂತಕ ಶಂಕರ್ ದೇವನೂರು ಮಾತನಾಡಿದರು. ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ವಿ.ಭೈರಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಉಡುಪ ಭಾವಗೀತೆ ಹಾಡಿದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕವಿ ಜಯಪ್ಪ ಹೊನ್ನಾಳಿ ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾ ಘಟಕದ ನ.ಗಂಗಾಧರಪ್ಪ, ಸಿರಿಬಾಲು, ಶಿಬಿರದ ಸಂಚಾಲಕರಾದ ಗೀತಲಕ್ಷ್ಮಿ ಕಿಣಿ, ಸುಜಾತಾ ಜಯಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-39-1517013328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>