<p>ಕೋಲಾರ: ತಾಲ್ಲೂಕಿನ ಮಂಗಸಂದ್ರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸುವರ್ಣಗಂಗೆ ಸ್ನಾತಕೋತ್ತರ ಕೇಂದ್ರದಲ್ಲಿ ಬುದ್ಧ ಜಯಂತಿ ಪ್ರಯುಕ್ತ ಕಾವ್ಯ ಬೆಳದಿಂಗಳು ಹಾಗೂ ಕವಿಗೋಷ್ಠಿ ನಡೆಯಿತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ‘ಬುದ್ಧ, ಕಾವ್ಯ ಮತ್ತು ಬೆಳದಿಂಗಳ ನಡುವೆ ಅವಿನಾಭಾವ ಸಂಬಂಧವಿದೆ. ಇಂದಿನ ಯುದ್ಧದ ಕಾರ್ಮೋಡಗಳ ನಡುವೆ ಬುದ್ಧ ಹೆಚ್ಚು ಪ್ರಸ್ತುತನಾಗಿದ್ದಾನೆ. ಬುದ್ಧನ ಬದುಕು ಲೌಕಿಕ ಜಗತ್ತಿಗೆ ಅಗತ್ಯವಿರುವ 'ಕಾವ್ಯ ಔಷಧ'ದಂತಿದೆ’ ಎಂದರು.</p>.<p>ಪದ ಪಾಂಡಿತ್ಯಕ್ಕಿಂತ ಸತ್ಯ ಮತ್ತು ಸರಳತೆಯೇ ಬುದ್ಧನ ದೃಷ್ಟಿಯಾಗಿತ್ತು. ಕವಿಗಳ ಲೇಖನಿಯಿಂದ ಬರುವ ಪ್ರತಿ ಸಾಲು ಜಗತ್ತಿಗೆ ಪ್ರೀತಿಯನ್ನು ಹಂಚಲಿ ಎಂದು ಆಶಿಸಿದರು.</p>.<p>ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ನೆಲಕುಂಟೆ ವೆಂಕಟೇಶಯ್ಯ ಮಾತನಾಡಿ, ‘ಬುದ್ಧ ಎನ್ನುವ ವ್ಯಕ್ತಿತ್ವ ಮನುಷ್ಯ ಲೋಕವು ಲಕ್ಷಾಂತರ ವರ್ಷಗಳ ನಂತರ ಕಂಡುಕೊಂಡ ಅತ್ಯಂತ ಅದ್ಭುತವಾದ ಶಕ್ತಿ. ಆತ ಕೇವಲ ಏಷ್ಯಾದ ಬೆಳಕಲ್ಲ, ಇಡೀ ಮಾನವ ಕುಲದ ಅರಿವಿನ ಬೆಳಕು’ ಎಂದು ಬಣ್ಣಿಸಿದರು.</p>.<p>ಬೌದ್ಧ ಪರಂಪರೆ ಮತ್ತು ಸಮಕಾಲೀನ ಸಮಾಜದ ಕುರಿತು ಮಾತನಾಡಿದ ಅವರು, ಕೋಲಾರದ ನೆಲಕ್ಕೂ ಬೌದ್ಧ ಧರ್ಮಕ್ಕೂ ಇರುವ ಅವಿನಾಭಾವ ಸಂಬಂಧವನ್ನು ಮೆಲುಕು ಹಾಕಿದರು.</p>.<p>ಮುಖ್ಯ ಅತಿಥಿಯಾಗಿದ್ದ ಕೆ. ಶರೀಫಾ ಮಾತನಾಡಿ, ‘ಬುದ್ಧನನ್ನು ಅವತಾರಪುರುಷನನ್ನಾಗಿ ಮಾಡುವ ಈ ಕಾಲದಲ್ಲಿ ಆತನ ನೈಜ ತತ್ವಗಳನ್ನು ಉಳಿಸಿಕೊಳ್ಳಬೇಕಿದೆ. ಬೌದ್ಧ ಧರ್ಮ ಮಹಿಳೆಯರಿಗೆ ಲಿಂಗ ಸಮಾನತೆ ಮತ್ತು ಗೌರವ ನೀಡಿದ ಶ್ರೇಷ್ಠ ಧರ್ಮ’ ಎಂದರು.</p>.<p>ದೂರದರ್ಶನ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್.ಆರತಿ, ‘ಅಹಿಂಸೆಯ ಹರಿಕಾರರಾದ ಬುದ್ಧ ಮತ್ತು ಮಹಾವೀರ ಭೇಟಿಯಾಗಿದ್ದರೆ ಜಗತ್ತಿಗೆ ಮತ್ತೊಂದು ಮಹಾಕಾವ್ಯ ದೊರೆಯುತ್ತಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಲಕ್ಷ್ಮಿಪತಿ ಕೋಲಾರ ಮಾತನಾಡಿ, ‘ಕಾವ್ಯದ ಬಗ್ಗೆ ಜಗತ್ತಿನಲ್ಲಿ ಈಗಾಗಲೇ ಸಾವಿರಾರು ವ್ಯಾಖ್ಯಾನಗಳಿವೆ. ಆದರೆ, ಈಗಾಗಲೇ ಅಸ್ತಿತ್ವದಲ್ಲಿರುವ ಚೌಕಟ್ಟುಗಳನ್ನು ಮತ್ತು ವ್ಯಾಖ್ಯಾನಗಳನ್ನು ತಿರಸ್ಕರಿಸುವುದೇ ನಿಜವಾದ ಕಾವ್ಯ’ ಎಂದು ಹೇಳಿದರು.</p>.<p>ಬೆಳದಿಂಗಳ ರಾತ್ರಿಯಲ್ಲಿ ನಡೆದ ಈ ಗೋಷ್ಠಿಯಲ್ಲಿ ಅವರ ಕಾವ್ಯದ ವಿವಿಧ ಆಯಾಮಗಳ ಕುರಿತು ನಡೆದ ಚರ್ಚೆಯು ಸಾಹಿತ್ಯಾಸಕ್ತರ ಗಮನ ಸೆಳೆಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಬಿ.ಕೆ.ರವಿ, ಇಂದಿನ ವಿಷಮ ಪರಿಸ್ಥಿತಿಯಲ್ಲಿ ಅತಿ ಅಗತ್ಯವಿರುವ ಮೂರು ಮಹತ್ವದ ಮಂತ್ರಗಳನ್ನು ಪ್ರತಿಪಾದಿಸಿದರು.</p>.<p>ಬುದ್ಧನ ಶಾಂತಿಯ ಸಂದೇಶ, ಬಸವಣ್ಣನವರ ಕಾಯಕ ಮಂದಿರದ ತತ್ವ, ಡಾ.ಬಿ.ಆರ್.ಅಂಬೇಡ್ಕರ್ ಅವರ ಜ್ಞಾನ ಮಂತ್ರ ಬೇಕಿದೆ. ಜಗತ್ತಿನಲ್ಲಿ ಶಾಂತಿ ಕಣ್ಮರೆಯಾಗುತ್ತಿರುವ ಈ ಆತಂಕಕಾರಿ ಸಂದರ್ಭದಲ್ಲಿ ನಾವು ಈ ಮೂರು ಮಂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆ ಮಾಡಬೇಕಾಗಿದೆ. ಈ ಮೂಲಕ ಸಮಾಜದಲ್ಲಿ ಹೊಸ ಬೆಳಕನ್ನು ಮೂಡಿಸಬೇಕಿದೆ’ ಎಂದರು.</p>.<p>ಕಾವ್ಯದ ಆಶಯ ಕುರಿತು ಅವಧಿ ಪತ್ರಿಕೆಯ ಸಂಪಾದಕ ಜಿ.ಎನ್.ಮೋಹನ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿಂತಕರು, ಅಧಿಕಾರಿಗಳು ಹಾಗೂ ಕವಿಗಳಿಗೆ ಕುಲಪತಿ ಅಭಿನಂದನೆ ಸಲ್ಲಿಸಿದರು. 50ಕ್ಕೂ ಹೆಚ್ಚು ಕವಿಗಳು ತಮ್ಮ ಕವನಗಳನ್ನು ವಾಚಿಸಿದರು. ಗಾಯತ್ರಿ ದೇವಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು.</p>.<p>ಪ್ರೊ.ಎನ್.ಲೋಕನಾಥ್, ಹಣಕಾಸು ಅಧಿಕಾರಿ ವಸಂತಕುಮಾರ್ ಬಿ. ವಿ., ಕ್ಯಾಂಪಸ್ ನಿರ್ದೇಶಕಿ ಪ್ರೊ.ಡಿ.ಕುಮುದಾ, ರಮೇಶ್ ಎಂ.ಎನ್. ಸೇರಿದಂತೆ ಹಲವು ಗಣ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-18-140988973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ತಾಲ್ಲೂಕಿನ ಮಂಗಸಂದ್ರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸುವರ್ಣಗಂಗೆ ಸ್ನಾತಕೋತ್ತರ ಕೇಂದ್ರದಲ್ಲಿ ಬುದ್ಧ ಜಯಂತಿ ಪ್ರಯುಕ್ತ ಕಾವ್ಯ ಬೆಳದಿಂಗಳು ಹಾಗೂ ಕವಿಗೋಷ್ಠಿ ನಡೆಯಿತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ‘ಬುದ್ಧ, ಕಾವ್ಯ ಮತ್ತು ಬೆಳದಿಂಗಳ ನಡುವೆ ಅವಿನಾಭಾವ ಸಂಬಂಧವಿದೆ. ಇಂದಿನ ಯುದ್ಧದ ಕಾರ್ಮೋಡಗಳ ನಡುವೆ ಬುದ್ಧ ಹೆಚ್ಚು ಪ್ರಸ್ತುತನಾಗಿದ್ದಾನೆ. ಬುದ್ಧನ ಬದುಕು ಲೌಕಿಕ ಜಗತ್ತಿಗೆ ಅಗತ್ಯವಿರುವ 'ಕಾವ್ಯ ಔಷಧ'ದಂತಿದೆ’ ಎಂದರು.</p>.<p>ಪದ ಪಾಂಡಿತ್ಯಕ್ಕಿಂತ ಸತ್ಯ ಮತ್ತು ಸರಳತೆಯೇ ಬುದ್ಧನ ದೃಷ್ಟಿಯಾಗಿತ್ತು. ಕವಿಗಳ ಲೇಖನಿಯಿಂದ ಬರುವ ಪ್ರತಿ ಸಾಲು ಜಗತ್ತಿಗೆ ಪ್ರೀತಿಯನ್ನು ಹಂಚಲಿ ಎಂದು ಆಶಿಸಿದರು.</p>.<p>ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ನೆಲಕುಂಟೆ ವೆಂಕಟೇಶಯ್ಯ ಮಾತನಾಡಿ, ‘ಬುದ್ಧ ಎನ್ನುವ ವ್ಯಕ್ತಿತ್ವ ಮನುಷ್ಯ ಲೋಕವು ಲಕ್ಷಾಂತರ ವರ್ಷಗಳ ನಂತರ ಕಂಡುಕೊಂಡ ಅತ್ಯಂತ ಅದ್ಭುತವಾದ ಶಕ್ತಿ. ಆತ ಕೇವಲ ಏಷ್ಯಾದ ಬೆಳಕಲ್ಲ, ಇಡೀ ಮಾನವ ಕುಲದ ಅರಿವಿನ ಬೆಳಕು’ ಎಂದು ಬಣ್ಣಿಸಿದರು.</p>.<p>ಬೌದ್ಧ ಪರಂಪರೆ ಮತ್ತು ಸಮಕಾಲೀನ ಸಮಾಜದ ಕುರಿತು ಮಾತನಾಡಿದ ಅವರು, ಕೋಲಾರದ ನೆಲಕ್ಕೂ ಬೌದ್ಧ ಧರ್ಮಕ್ಕೂ ಇರುವ ಅವಿನಾಭಾವ ಸಂಬಂಧವನ್ನು ಮೆಲುಕು ಹಾಕಿದರು.</p>.<p>ಮುಖ್ಯ ಅತಿಥಿಯಾಗಿದ್ದ ಕೆ. ಶರೀಫಾ ಮಾತನಾಡಿ, ‘ಬುದ್ಧನನ್ನು ಅವತಾರಪುರುಷನನ್ನಾಗಿ ಮಾಡುವ ಈ ಕಾಲದಲ್ಲಿ ಆತನ ನೈಜ ತತ್ವಗಳನ್ನು ಉಳಿಸಿಕೊಳ್ಳಬೇಕಿದೆ. ಬೌದ್ಧ ಧರ್ಮ ಮಹಿಳೆಯರಿಗೆ ಲಿಂಗ ಸಮಾನತೆ ಮತ್ತು ಗೌರವ ನೀಡಿದ ಶ್ರೇಷ್ಠ ಧರ್ಮ’ ಎಂದರು.</p>.<p>ದೂರದರ್ಶನ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್.ಆರತಿ, ‘ಅಹಿಂಸೆಯ ಹರಿಕಾರರಾದ ಬುದ್ಧ ಮತ್ತು ಮಹಾವೀರ ಭೇಟಿಯಾಗಿದ್ದರೆ ಜಗತ್ತಿಗೆ ಮತ್ತೊಂದು ಮಹಾಕಾವ್ಯ ದೊರೆಯುತ್ತಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಲಕ್ಷ್ಮಿಪತಿ ಕೋಲಾರ ಮಾತನಾಡಿ, ‘ಕಾವ್ಯದ ಬಗ್ಗೆ ಜಗತ್ತಿನಲ್ಲಿ ಈಗಾಗಲೇ ಸಾವಿರಾರು ವ್ಯಾಖ್ಯಾನಗಳಿವೆ. ಆದರೆ, ಈಗಾಗಲೇ ಅಸ್ತಿತ್ವದಲ್ಲಿರುವ ಚೌಕಟ್ಟುಗಳನ್ನು ಮತ್ತು ವ್ಯಾಖ್ಯಾನಗಳನ್ನು ತಿರಸ್ಕರಿಸುವುದೇ ನಿಜವಾದ ಕಾವ್ಯ’ ಎಂದು ಹೇಳಿದರು.</p>.<p>ಬೆಳದಿಂಗಳ ರಾತ್ರಿಯಲ್ಲಿ ನಡೆದ ಈ ಗೋಷ್ಠಿಯಲ್ಲಿ ಅವರ ಕಾವ್ಯದ ವಿವಿಧ ಆಯಾಮಗಳ ಕುರಿತು ನಡೆದ ಚರ್ಚೆಯು ಸಾಹಿತ್ಯಾಸಕ್ತರ ಗಮನ ಸೆಳೆಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಬಿ.ಕೆ.ರವಿ, ಇಂದಿನ ವಿಷಮ ಪರಿಸ್ಥಿತಿಯಲ್ಲಿ ಅತಿ ಅಗತ್ಯವಿರುವ ಮೂರು ಮಹತ್ವದ ಮಂತ್ರಗಳನ್ನು ಪ್ರತಿಪಾದಿಸಿದರು.</p>.<p>ಬುದ್ಧನ ಶಾಂತಿಯ ಸಂದೇಶ, ಬಸವಣ್ಣನವರ ಕಾಯಕ ಮಂದಿರದ ತತ್ವ, ಡಾ.ಬಿ.ಆರ್.ಅಂಬೇಡ್ಕರ್ ಅವರ ಜ್ಞಾನ ಮಂತ್ರ ಬೇಕಿದೆ. ಜಗತ್ತಿನಲ್ಲಿ ಶಾಂತಿ ಕಣ್ಮರೆಯಾಗುತ್ತಿರುವ ಈ ಆತಂಕಕಾರಿ ಸಂದರ್ಭದಲ್ಲಿ ನಾವು ಈ ಮೂರು ಮಂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆ ಮಾಡಬೇಕಾಗಿದೆ. ಈ ಮೂಲಕ ಸಮಾಜದಲ್ಲಿ ಹೊಸ ಬೆಳಕನ್ನು ಮೂಡಿಸಬೇಕಿದೆ’ ಎಂದರು.</p>.<p>ಕಾವ್ಯದ ಆಶಯ ಕುರಿತು ಅವಧಿ ಪತ್ರಿಕೆಯ ಸಂಪಾದಕ ಜಿ.ಎನ್.ಮೋಹನ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿಂತಕರು, ಅಧಿಕಾರಿಗಳು ಹಾಗೂ ಕವಿಗಳಿಗೆ ಕುಲಪತಿ ಅಭಿನಂದನೆ ಸಲ್ಲಿಸಿದರು. 50ಕ್ಕೂ ಹೆಚ್ಚು ಕವಿಗಳು ತಮ್ಮ ಕವನಗಳನ್ನು ವಾಚಿಸಿದರು. ಗಾಯತ್ರಿ ದೇವಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು.</p>.<p>ಪ್ರೊ.ಎನ್.ಲೋಕನಾಥ್, ಹಣಕಾಸು ಅಧಿಕಾರಿ ವಸಂತಕುಮಾರ್ ಬಿ. ವಿ., ಕ್ಯಾಂಪಸ್ ನಿರ್ದೇಶಕಿ ಪ್ರೊ.ಡಿ.ಕುಮುದಾ, ರಮೇಶ್ ಎಂ.ಎನ್. ಸೇರಿದಂತೆ ಹಲವು ಗಣ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-18-140988973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>