<p>ಮಂಡ್ಯ: ಮೈಸೂರು ಆಕಾಶವಾಣಿ ಮತ್ತು ಮಂಡ್ಯದ ಕರ್ನಾಟಕ ಸಂಘದ ಸಹಯೋಗದಲ್ಲಿ ಮುಂಗಾರು ಮಳೆ–ಇಳೆ: ಕಾವ್ಯಧಾರೆ ಮತ್ತು ಬಾನುಲಿ ಬರವಣಿಗೆ ಕಾರ್ಯಾಗಾರವನ್ನು ಮೇ 21ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ವಿಶ್ರಾಂತ ಪ್ರಾಂಶುಪಾಲರಾದ ಲೀಲಾ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆಕಾಶವಾಣಿಯ ಸಹಾಯಕ ನಿರ್ದೇಶಕ ಮಂಜುನಾಥ್ ಎನ್. ಬೇದ್ರೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಹಾಗೂ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಎಂ.ಕೇಶವಮೂರ್ತಿ ಪಾಲ್ಗೊಳ್ಳಲಿದ್ದಾರೆ.</p>.<p>ಕವಿಗೋಷ್ಠಿಯಲ್ಲಿ 20 ಕವಿಗಳು ಕವನ ವಾಚನ ಮಾಡಲಿದ್ದಾರೆ. ಅದೇ ದಿನ ಮಧ್ಯಾಹ್ನ 2.30ರಿಂದ 4.30ರವರೆಗೆ ಯುವ ಬರಹಗಾರರಿಗೋಸ್ಕರ ‘ಬಾನುಲಿ ಬರವಣಿಗೆ - ಕಾರ್ಯಾಗಾರ’ ನಡೆಯಲಿದೆ. ಬಾನುಲಿ ನಾಟಕಗಳು, ವಿಶೇಷ ರೂಪಕ, ಸಾಕ್ಷ್ಯಚಿತ್ರ, ಚಿಂತನ ಮತ್ತು ಭಾಷಣ ಕುರಿತು ಆಕಾಶವಾಣಿ ಅಧಿಕಾರಿಗಳು ಕಾರ್ಯಾಗಾರ ನಡೆಸಿಕೊಡಲಿದ್ದಾರೆ.</p>.<p>100 ಯುವ ಬರಹಗಾರರಿಗೆ ಭಾಗವಹಿಸಲು ಅವಕಾಶವಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-40-1333200281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಮೈಸೂರು ಆಕಾಶವಾಣಿ ಮತ್ತು ಮಂಡ್ಯದ ಕರ್ನಾಟಕ ಸಂಘದ ಸಹಯೋಗದಲ್ಲಿ ಮುಂಗಾರು ಮಳೆ–ಇಳೆ: ಕಾವ್ಯಧಾರೆ ಮತ್ತು ಬಾನುಲಿ ಬರವಣಿಗೆ ಕಾರ್ಯಾಗಾರವನ್ನು ಮೇ 21ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ವಿಶ್ರಾಂತ ಪ್ರಾಂಶುಪಾಲರಾದ ಲೀಲಾ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆಕಾಶವಾಣಿಯ ಸಹಾಯಕ ನಿರ್ದೇಶಕ ಮಂಜುನಾಥ್ ಎನ್. ಬೇದ್ರೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಹಾಗೂ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಎಂ.ಕೇಶವಮೂರ್ತಿ ಪಾಲ್ಗೊಳ್ಳಲಿದ್ದಾರೆ.</p>.<p>ಕವಿಗೋಷ್ಠಿಯಲ್ಲಿ 20 ಕವಿಗಳು ಕವನ ವಾಚನ ಮಾಡಲಿದ್ದಾರೆ. ಅದೇ ದಿನ ಮಧ್ಯಾಹ್ನ 2.30ರಿಂದ 4.30ರವರೆಗೆ ಯುವ ಬರಹಗಾರರಿಗೋಸ್ಕರ ‘ಬಾನುಲಿ ಬರವಣಿಗೆ - ಕಾರ್ಯಾಗಾರ’ ನಡೆಯಲಿದೆ. ಬಾನುಲಿ ನಾಟಕಗಳು, ವಿಶೇಷ ರೂಪಕ, ಸಾಕ್ಷ್ಯಚಿತ್ರ, ಚಿಂತನ ಮತ್ತು ಭಾಷಣ ಕುರಿತು ಆಕಾಶವಾಣಿ ಅಧಿಕಾರಿಗಳು ಕಾರ್ಯಾಗಾರ ನಡೆಸಿಕೊಡಲಿದ್ದಾರೆ.</p>.<p>100 ಯುವ ಬರಹಗಾರರಿಗೆ ಭಾಗವಹಿಸಲು ಅವಕಾಶವಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-40-1333200281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>