ಬೆಟ್ಟ ಬಂಡೆಯ ನಡುವೆ ಗಿಡ ಮರ ಹೂವನೆತ್ತಿರೆ ಪೂಜೆಗೆ ದೇಗುಲದ ಪೂಜಾರತಿಯ ಗಂಟೆಯ ಮೊಳಗು ಮುಟ್ಟಲು ಬಾನಿಗೆ ಧೂಪಗಂಧವು ಮಂದಮಂದಾನಿಲ ಜೊತೆಯೊಳು ಮನಸಿಗೆ ಸಂಭ್ರಮವನುಕ್ಕಿಸೆ ಬೆಳಗು ಇಳಿವುದು ಸಿದ್ಧಗಂಗೆಯ ಕ್ಷೇತ್ರಕೆ
ಇಲ್ಲಿ ಇಲ್ಲ ಪವಾಡದದ್ಭುತ ಅಥವ ಉತ್ಸವದಬ್ಬರ ಮುಡಿಯನೆತ್ತಿದೆ ಸರಳ ಸಾಧಾರಣ ಬದುಕಿನ ಗೋಪುರ ಅದರ ಮೇಲಿದೆ ತ್ಯಾಗಧ್ವಜ ಕೈಬೀಸಿ ಕರೆವುದು ಪಥಿಕರ ಪರಮ ನಿರಪೇಕ್ಷೆಯಲ್ಲಿ ದಿನವೂ ಸೇವೆಗಾಗಿದೆ ಸರ್ವರ
ಸದ್ದುಗದ್ದಲವಿಲ್ಲದ ಸಾಧನೆ ಇಲ್ಲಿ ಗದ್ದುಗೆಯೇರಿದೆ ಕಾಯಕವೆ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ ಕಾವಿಯುಡುಗೆಯನುಟ್ಟು ನಭವೇ ಕಿರಣ ಹಸ್ತವ ಚಾಚಿದೆ ಎಲ್ಲ ನನ್ನವರೆನುವ ಭಾವದ ಕರುಣೆಯೇ ಕಣ್ತೆರೆದಿದೆ