<p><strong>ಮಂಡ್ಯ</strong>: 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರು "ಅರಮನೆ ದರ್ಬಾರ್ ಸಿಂಹಾಸನ" ಒಳಗೊಂಡ ವಿಶೇಷ ರಥವನ್ನು ಏರಿದ್ದು, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿದೆ. .</p><p>ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೊದಲು ರಥ ಏರಿ ನಂತರ ಗೊರುಚ ಅವರಿಗೆ ಸಹಾಯ ಹಸ್ತ ಚಾಚಿ ರಥಕ್ಕೆ ಬರಮಾಡಿಕೊಂಡರು.</p><p>ಗೊರುಚ ಅವರಿಗೆ ಸುಗಂಧರಾಜ ಹೂವು ಮತ್ತು ರೇಷ್ಮೆ ಹಾರ ಹಾಕಿ, ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು.</p><p>ಹಿಮ್ಮೇಳದಲ್ಲಿ "ಮರೆಯಬೇಡವೋ ಕನ್ನಡ ನಾಡ, ನೀ ತೊರೆಯಬೇಡವೂ ಕನ್ನಡ ನುಡಿಯ, ಎಚ್ಚರವಾಗು ಕನ್ನಡಿಗ" ಹಾಡು ಪ್ರತಿಧ್ವನಿಸಿತು.</p><p>ಪುರುಷೋತ್ತಮಾನಂದನಾಥ ಸ್ವಾಮೀಜಿ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಸಚಿವ ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಮೀರಾ ಶಿವಲಿಂಗಯ್ಯ ಮುಂತಾದ ಗಣ್ಯರು ಪಾಲ್ಗೊಂಡಿದ್ದರು.</p><p><strong>ಒಂದೂವರೆ ಗಂಟೆ ತಡವಾಗಿ ಆರಂಭವಾದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿದೆ.</strong></p><p>ವಿವಿಧ ಜಿಲ್ಲೆ ಮತ್ತು ಹೊರರಾಜ್ಯಗಳ 157 ಕಲಾತಂಡಗಳು 2,250 ಕಲಾವಿದರು ಭಾಗಿಯಾಗಿದ್ದಾರೆ. ಮೆರವಣಿಗೆಗೆ ಚಾಲನೆ ನೀಡಬೇಕಿದ್ದ ಮೈಸೂರು ಅರಮನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಗೈರಾಗಿದ್ದಾರೆ.</p><p>ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದ ಸಮ್ಮೇಳನದ ವೇದಿಕೆ ಸ್ಥಳಕ್ಕೆ ಆರು ಕಿಲೋಮೀಟರ್ ಅಂತರದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಬೆಳಿಗ್ಗೆ ಏಳು ಗಂಟೆಗೆ ಆರಂಭವಾಗಬೇಕಿತ್ತು. ಆದರೆ ಬೆಳಗ್ಗೆ 8:25ಕ್ಕೆ ಆರಂಭಗೊಂಡಿತು.</p><p>ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಮೈಸೂರು ಅರಮನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಬೇಕಿತ್ತು. ಅವರು ಗೈರು ಹಾಜರಿಯಾದ ಕಾರಣ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.</p><p>ಮೆರವಣಿಗೆಯಲ್ಲಿ ನಂದಿಧ್ವಜ, ನಾದಸ್ವರ, ವೀರಗಾಸೆ, ತಮಟೆ, ಪೂಜಾ ಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಕಂಸಾಳೆ, ಮಹಿಳಾ ವೀರಗಾಸೆ, ಕೀಲು ಕುದುರೆ, ಪಟ ಕುಣಿತ, ಪೂಜಾ ಕುಣಿತ, ತಮಟೆ ಸೇರಿದಂತೆ 157 ಕಲಾತಂಡಗಳು 2,250 ಕಲಾವಿದರು ಪಾಲ್ಗೊಂಡಿದ್ದಾರೆ.</p><p>31 ಜಿಲ್ಲೆಯಿಂದ 38 ಕಲಾತಂಡಗಳು ಹಾಗೂ ಆರು ಹೊರರಾಜ್ಯಗಳ ಕಲಾತಂಡಗಳು ಭಾಗವಹಿಸಿರುವುದು ವಿಶೇಷವಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರು "ಅರಮನೆ ದರ್ಬಾರ್ ಸಿಂಹಾಸನ" ಒಳಗೊಂಡ ವಿಶೇಷ ರಥವನ್ನು ಏರಿದ್ದು, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿದೆ. .</p><p>ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೊದಲು ರಥ ಏರಿ ನಂತರ ಗೊರುಚ ಅವರಿಗೆ ಸಹಾಯ ಹಸ್ತ ಚಾಚಿ ರಥಕ್ಕೆ ಬರಮಾಡಿಕೊಂಡರು.</p><p>ಗೊರುಚ ಅವರಿಗೆ ಸುಗಂಧರಾಜ ಹೂವು ಮತ್ತು ರೇಷ್ಮೆ ಹಾರ ಹಾಕಿ, ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು.</p><p>ಹಿಮ್ಮೇಳದಲ್ಲಿ "ಮರೆಯಬೇಡವೋ ಕನ್ನಡ ನಾಡ, ನೀ ತೊರೆಯಬೇಡವೂ ಕನ್ನಡ ನುಡಿಯ, ಎಚ್ಚರವಾಗು ಕನ್ನಡಿಗ" ಹಾಡು ಪ್ರತಿಧ್ವನಿಸಿತು.</p><p>ಪುರುಷೋತ್ತಮಾನಂದನಾಥ ಸ್ವಾಮೀಜಿ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಸಚಿವ ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್, ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಮೀರಾ ಶಿವಲಿಂಗಯ್ಯ ಮುಂತಾದ ಗಣ್ಯರು ಪಾಲ್ಗೊಂಡಿದ್ದರು.</p><p><strong>ಒಂದೂವರೆ ಗಂಟೆ ತಡವಾಗಿ ಆರಂಭವಾದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿದೆ.</strong></p><p>ವಿವಿಧ ಜಿಲ್ಲೆ ಮತ್ತು ಹೊರರಾಜ್ಯಗಳ 157 ಕಲಾತಂಡಗಳು 2,250 ಕಲಾವಿದರು ಭಾಗಿಯಾಗಿದ್ದಾರೆ. ಮೆರವಣಿಗೆಗೆ ಚಾಲನೆ ನೀಡಬೇಕಿದ್ದ ಮೈಸೂರು ಅರಮನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಗೈರಾಗಿದ್ದಾರೆ.</p><p>ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದ ಸಮ್ಮೇಳನದ ವೇದಿಕೆ ಸ್ಥಳಕ್ಕೆ ಆರು ಕಿಲೋಮೀಟರ್ ಅಂತರದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಬೆಳಿಗ್ಗೆ ಏಳು ಗಂಟೆಗೆ ಆರಂಭವಾಗಬೇಕಿತ್ತು. ಆದರೆ ಬೆಳಗ್ಗೆ 8:25ಕ್ಕೆ ಆರಂಭಗೊಂಡಿತು.</p><p>ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಮೈಸೂರು ಅರಮನೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಬೇಕಿತ್ತು. ಅವರು ಗೈರು ಹಾಜರಿಯಾದ ಕಾರಣ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.</p><p>ಮೆರವಣಿಗೆಯಲ್ಲಿ ನಂದಿಧ್ವಜ, ನಾದಸ್ವರ, ವೀರಗಾಸೆ, ತಮಟೆ, ಪೂಜಾ ಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಕಂಸಾಳೆ, ಮಹಿಳಾ ವೀರಗಾಸೆ, ಕೀಲು ಕುದುರೆ, ಪಟ ಕುಣಿತ, ಪೂಜಾ ಕುಣಿತ, ತಮಟೆ ಸೇರಿದಂತೆ 157 ಕಲಾತಂಡಗಳು 2,250 ಕಲಾವಿದರು ಪಾಲ್ಗೊಂಡಿದ್ದಾರೆ.</p><p>31 ಜಿಲ್ಲೆಯಿಂದ 38 ಕಲಾತಂಡಗಳು ಹಾಗೂ ಆರು ಹೊರರಾಜ್ಯಗಳ ಕಲಾತಂಡಗಳು ಭಾಗವಹಿಸಿರುವುದು ವಿಶೇಷವಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>