‘2014ರ ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿ ನೀಡಿದ್ದ ಭರವಸೆಗಳಿಂದಾಗಿ ಜನ ಆ ಪಕ್ಷದ ಬಗ್ಗೆ ನಂಬಿಕೆ ಇರಿಸಿಕೊಂಡಿದ್ದರು. ತಮ್ಮ ಕಠಿಣ ಶ್ರಮಕ್ಕೆ ಗೌರವ ಸಿಗಲಿದೆ, ಬೆಳೆಗೆ ಉತ್ತಮ ಬೆಲೆ ದೊರೆಯಲಿದೆ ಎಂದು ರೈತರು ಭಾವಿಸಿದ್ದರು. ಆದರೆ ಈ ಸರ್ಕಾರ ನಿರುದ್ಯೋಗ, ಭಯ, ದ್ವೇಷ ಮತ್ತು ಹಿಂಸೆಯಿಂದ ಕೂಡಿದ ನಿರಾಶಾವಾದವನ್ನಷ್ಟೇ ನೀಡಿದೆ. ವಿಜಯ್ ಮಲ್ಯ ಮತ್ತು ನೀರವ್ ಮೋದಿ ಪ್ರಕರಣದಿಂದಾಗಿ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆಗೊಳಿಸುವ ಬದಲು ತಾನೇ ಅದರಲ್ಲಿ ಭಾಗಿಯಾಗುತ್ತಿರುವುದನ್ನು ಕಾಣಬಹುದು’ ಎಂದು ರಾಹುಲ್ ಆರೋಪಿಸಿದ್ದಾರೆ.