<p><strong>ಶಿವಮೊಗ್ಗ:</strong> ಪ್ರತಿಯೊಬ್ಬ ಮನುಷ್ಯನ ಜೀವನದಲ್ಲೂ ಸಿನಿಮಾ, ಸಾಹಿತ್ಯ ಪ್ರಭಾವ ಇರುತ್ತದೆ. ಅವುಗಳ ಉತ್ತಮ ಅಂಶಗಳು ಮನುಷ್ಯನ ಜೀವನದ ಆಗುಹೋಗುಗಳ ಮೇಲೆ ಗಾಢ ಪರಿಣಾಮ ಬೀರಬಲ್ಲದು ಎಂದು ಕವಿ ಜಯಂತ ಕಾಯ್ಕಿಣಿ ಹೇಳಿದರು.</p>.<p>ಇಲ್ಲಿನ ಮಾನಸ ಟ್ರಸ್ಟ್ ಡಾ.ಕಟೀಲ್ ಅಶೋಕ್ ಪೈ ಸ್ಮರಣಾರ್ಥ ನೀಡುವ ‘ಮಾನಸ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಿನಿಮಾ ಹಾಗೂ ಸಾಹಿತ್ಯ ಬದುಕಿಗೆ ಅತ್ಯಂತ ಹತ್ತಿರವಾಗಿವೆ. ಪ್ರತಿಯೊಬ್ಬ ಮನುಷ್ಯನೂ ಅರ್ಥೈಸಿಕೊಂಡು ಮನಮಿಡಿಯುವ ವಿಷಯಗಳಾಗಿವೆ. ಸಿನಿಮಾ ರಂಜನೆಯ ಜತೆಗೆ ಸಮಾಜದಲ್ಲಿನ ಆಗು ಹೋಗುಗಳನ್ನು ತೆರೆದಿಡುತ್ತವೆ. ಸಾಹಿತ್ಯ ಭರವಸೆಯ ಬದುಕಿಗೆ ಪೂರಕವಾಗಿದೆ. ನೆಮ್ಮದಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.</p>.<p>ಬೆಂಗಳೂರಿನ ಮನೋವೈದ್ಯ ಡಾ.ಸ್ವಾಮಿನಾಥ ಗೋಪಾಲರಾವ್, ನಿಮ್ಹಾನ್ಸ್ ಪ್ರಾಧ್ಯಾಪಕ ಡಾ.ಜಗದೀಶ್ ತೀರ್ಥಹಳ್ಳಿ ಅವರಿಗೆ ತಲಾ ₹ 75 ಸಾವಿರ ನಗದು, ಫಲಕ ಒಳಗೊಂಡ ಮಾನಸ ಪ್ರಸಸ್ತಿ ಪ್ರಸಸ್ತಿ ನೀಡಿ ಪುರಸ್ಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಪ್ರತಿಯೊಬ್ಬ ಮನುಷ್ಯನ ಜೀವನದಲ್ಲೂ ಸಿನಿಮಾ, ಸಾಹಿತ್ಯ ಪ್ರಭಾವ ಇರುತ್ತದೆ. ಅವುಗಳ ಉತ್ತಮ ಅಂಶಗಳು ಮನುಷ್ಯನ ಜೀವನದ ಆಗುಹೋಗುಗಳ ಮೇಲೆ ಗಾಢ ಪರಿಣಾಮ ಬೀರಬಲ್ಲದು ಎಂದು ಕವಿ ಜಯಂತ ಕಾಯ್ಕಿಣಿ ಹೇಳಿದರು.</p>.<p>ಇಲ್ಲಿನ ಮಾನಸ ಟ್ರಸ್ಟ್ ಡಾ.ಕಟೀಲ್ ಅಶೋಕ್ ಪೈ ಸ್ಮರಣಾರ್ಥ ನೀಡುವ ‘ಮಾನಸ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಿನಿಮಾ ಹಾಗೂ ಸಾಹಿತ್ಯ ಬದುಕಿಗೆ ಅತ್ಯಂತ ಹತ್ತಿರವಾಗಿವೆ. ಪ್ರತಿಯೊಬ್ಬ ಮನುಷ್ಯನೂ ಅರ್ಥೈಸಿಕೊಂಡು ಮನಮಿಡಿಯುವ ವಿಷಯಗಳಾಗಿವೆ. ಸಿನಿಮಾ ರಂಜನೆಯ ಜತೆಗೆ ಸಮಾಜದಲ್ಲಿನ ಆಗು ಹೋಗುಗಳನ್ನು ತೆರೆದಿಡುತ್ತವೆ. ಸಾಹಿತ್ಯ ಭರವಸೆಯ ಬದುಕಿಗೆ ಪೂರಕವಾಗಿದೆ. ನೆಮ್ಮದಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.</p>.<p>ಬೆಂಗಳೂರಿನ ಮನೋವೈದ್ಯ ಡಾ.ಸ್ವಾಮಿನಾಥ ಗೋಪಾಲರಾವ್, ನಿಮ್ಹಾನ್ಸ್ ಪ್ರಾಧ್ಯಾಪಕ ಡಾ.ಜಗದೀಶ್ ತೀರ್ಥಹಳ್ಳಿ ಅವರಿಗೆ ತಲಾ ₹ 75 ಸಾವಿರ ನಗದು, ಫಲಕ ಒಳಗೊಂಡ ಮಾನಸ ಪ್ರಸಸ್ತಿ ಪ್ರಸಸ್ತಿ ನೀಡಿ ಪುರಸ್ಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>