ರಬಕವಿ -ಬನಹಟ್ಟಿ : ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣೆ ಖಾಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಮೀಪದ ಹಿಪ್ಪರಗಿ ಜಲಾಶಯ ಕೂಡ ಖಾಲಿಯಾಗಿದ್ದು ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ನಗರ ಮತ್ತು ಗ್ರಾಮೀಣ ಪ್ರದೇಶದ ಲಕ್ಷಾಂತರ ಜನ ಮತ್ತು ಜಾನುವಾರುಗಳು ಮುಂಬರುವ ದಿನಗಳಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಅದಾಗಲೇ ರಬಕವಿ-ಬನಹಟ್ಟಿ ತಾಲ್ಲೂಕಿನ ಹಲವೆಡೆ ನೀರಿನ ಸಮಸ್ಯೆ ಪ್ರಾರಂಭವಾಗಿದೆ.