ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಪ್ರಚಾರಕರ ಕೈವಾಡ’

Last Updated 15 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬಲಿಯಾ: ‘ಬಾಬಾಸಾಹೇಬ್‌ ಅಂಬೇಡ್ಕರ್‌ ಪ್ರತಿಮೆಗಳ ಧ್ವಂಸ ಹಾಗೂ ವಿರೂಪಗೊಳಿಸುವ ಪ್ರಕರಣಗಳ ಹಿಂದೆ ಕ್ರಿಶ್ಚಿಯನ್‌ ಧರ್ಮಪ್ರಚಾರಕರ ಕೈವಾಡವಿದೆ. ಇಂಥ ಕೃತ್ಯ ಎಸಗುವವರಿಗೆ ಅವರು ಹಣಕಾಸಿನ ನೆರವು ನೀಡುತ್ತಿದ್ದಾರೆ’ ಎಂದು ಬಿಜೆಪಿ ಸಂಸದ ಭರತ್‌ ಸಿಂಗ್‌ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿನ ಪಕ್ಷದ ಪ್ರಗತಿಯನ್ನು ಸಹಿಸಿಕೊಳ್ಳಲು ಕ್ರಿಶ್ಚಿಯನ್‌ ಧರ್ಮಪ್ರಚಾರಕರಿಗೆ ಆಗುತ್ತಿಲ್ಲ ಎಂದು ಟೀಕಿಸಿದ ಅವರು, ಹಣದ ಆಮೀಷವೊಡ್ಡಿ ಹಿಂದೂಗಳನ್ನು ಮತಾಂತರಗೊಳಿಸುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಸಂಸದರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ರಾಮಶಂಕರ್‌ ವಿದ್ಯಾರ್ಥಿ, ಅಂಬೇಡ್ಕರ್‌ ಹೆಸರಿನಲ್ಲಿ ಬಿಜೆಪಿ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT