ಸಭಾ ಕಾರ್ಯಕ್ರಮದ ಬಳಿಕ "ಪಾರ್ಥ ಸಾರಥಿ" ಯಕ್ಷಗಾನ ತಾಳಮದ್ದಳೆ ಜರುಗಿತು. ಹಿಮ್ಮೇಳದಲ್ಲಿ ಪುತ್ತಿಗೆ ರಘುರಾಮ ಹೊಳ್ಳ, ಶ್ರೀಶ ರಾವ್ ನಿಡ್ಲೆ, ಅಕ್ಷಯ ರಾವ್ ವಿಟ್ಲ ಹಾಗೂ ಮುಮ್ಮೇಳದಲ್ಲಿ ಡಾ.ಎಂ.ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್, ರಾಧಾಕೃಷ್ಣ ಕಲ್ಚಾರ್ ವಿಟ್ಲ ಹಾಗೂ ಶಶಾಂಕ ಅರ್ನಾಡಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.