ಬೆಳಗಾವಿ ಗ್ರಾಮೀಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ, ಸಹಕಾರ ಸಚಿವ ರಮೇಶ ಜಾರಕಿಹೊಳಿ ಮತ್ತು ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಟಿಕೆಟ್ ಹಂಚಿಕೆಯ ಗೊಂದಲ ನಾಯಕರ ಮಧ್ಯೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಾರದು ಎಂದು ಅವರಲ್ಲಿ ಮುಖ್ಯಮಂತ್ರಿ ಮತ್ತೊಮ್ಮೆ ಹೇಳಿದರು ಎಂದು ಗೊತ್ತಾಗಿದೆ.