ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಕ್ಷ ಒತ್ತೆ ಇಡಲು ಆಗತ್ತಾ?’

Last Updated 13 ಏಪ್ರಿಲ್ 2018, 20:12 IST
ಅಕ್ಷರ ಗಾತ್ರ

ಬೆಂಗಳೂರು: ‘ಇಲ್ಲಿನ ಎಂಎಲ್‌ಎ (ಮುನಿರತ್ನ) ನಿರ್ಮಿಸುತ್ತಿರುವ ‘ಕುರುಕ್ಷೇತ್ರ’ ಸಿನಿಮಾದಲ್ಲಿ ನನ್ನ ಮಗನಿಗೆ ಪಾತ್ರ ಕೊಟ್ಟರೆಂದು ಪಕ್ಷವನ್ನು ಒತ್ತೆ ಇಡಲು ಆಗುತ್ತದಾ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನಗರದ ರಾಜರಾಜೇಶ್ವರಿ ನಗರದಲ್ಲಿ ನಡೆದ ವಿಕಾಸಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರಿಗೆ ವಿಷ ಕೊಟ್ಟು ನಾನು ರಾಜಕೀಯ ಮಾಡುವುದಿಲ್ಲ’ ಎಂದರು.

‘ಮಗನಿಗೋಸ್ಕರ ಕುಮಾರಣ್ಣ ರಾಜರಾಜೇಶ್ವರಿ ನಗರ ಕ್ಷೇತ್ರ ಬಲಿ ಕೊಟ್ಟಿದ್ದಾರೆ ಎಂಬ ಸಂದೇಶ ವಾಟ್ಸ್‌ ಆ್ಯಪ್‌ ಮತ್ತು ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿದೆ. ಈ ಕ್ಷೇತ್ರದ ಶಾಸಕರು ಏನು ಎಂಬುದು ನನಗೆ ಗೊತ್ತು. ನನ್ನನ್ನು ಕೊಂಡುಕೊಳ್ಳುವುದಕ್ಕೆ ಆಗೋದಿಲ್ಲ’ ಎಂದು ಹೇಳಿದರು.

‘ಇಲ್ಲಿ ಡಮ್ಮಿ ಕ್ಯಾಂಡಿಡೇಟ್‌ ಆಗಿ ಪ್ರಕಾಶ್‌ ಅವರನ್ನು ಹಾಕುತ್ತೇನೆ ಎಂಬ ವದಂತಿ ಹಬ್ಬಿದೆ. ಅದರಲ್ಲಿ ಹುರುಳಿಲ್ಲ. ನನಗೆ ಪಕ್ಷ ಮುಖ್ಯ. ಮಗನನ್ನು ರಾಜಕೀಯಕ್ಕೆ ಕರೆ ತರಲು ಕೆಲವರು ಪ್ರಯತ್ನ ಮಾಡಿದರು. ರಾಜಕೀಯದ ಸಹವಾಸ ಬೇಡ ಎಂದು ಬುದ್ದಿ ಮಾತು ಹೇಳಿದ್ದೇನೆ. ಸಿನಿಮಾ ನಟನಾಗಲಿ ಎಂದು ಪ್ರೋತ್ಸಾಹ ನೀಡಿದ್ದೇನೆ’ ಎಂದು ಕುಮಾರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT