ಹಬ್ಬದ ಮೊದಲ ದಿನವಾದ ನರಕ ಚತುರ್ದಶಿಯಂದು ಎಣ್ಣೆ ಸ್ನಾನ ಮಾಡಲಾಗುತ್ತದೆ. ಅಂದು ಬಲೀಂದ್ರನನ್ನು ಪ್ರತಿಷ್ಠಾಪಿಸಲಾಗುತ್ತದೆ. ಸವತೆ ಕಾಯಿ, ಮೊಗೆ ಕಾಯಿಯನ್ನು ಕಲಶದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ತೆಂಗಿನಕಾಯಿಯ ಮೇಲೆ ಅಡಿಕೆಯ ಸಿಂಗಾರ ಇಟ್ಟರೆ ಬಲೀಂದ್ರ ಪ್ರತಿಷ್ಠಾಪನೆಯಾದಂತೆ. ಅಮಾವಾಸ್ಯೆಯ ದಿನ ಲಕ್ಷ್ಮೀಪೂಜೆ ನಿಮಿತ್ತ ವಾಹನ, ಅಂಗಡಿಗಳಿಗೆ, ಯಂತ್ರೋಪಕರಣಗಳಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.