‘ಪ್ರಧಾನಿ ಮೋದಿ ಹಾಗೂ ಕೇಂದ್ರದ ಸಚಿವರು ಕರ್ನಾಟಕದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರಿಂದ, ಕಾವೇರಿ ನೀರು ಹಂಚಿಕೆಯ ಯೋಜನೆಗೆ ಸಂಬಂಧಿಸಿದ ಕರಡು ಸಿದ್ಧಪಡಿಸಲಾಗಿಲ್ಲ. ಹಾಗಾಗಿ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಬೇಕು’ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯ ದಿನವಾದ ಮೇ 8ರೊಳಗೆ ಯೋಜನೆಯ ಕರಡು ಸಿದ್ಧಪಡಿಸಬೇಕು ಎಂದು ಆದೇಶಿಸಿತು.