ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದೆ. ಆದರೆ ಸಿದ್ದರಾಮಯ್ಯ ಸರ್ಕಾರ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಲ್ಲ. ಆದ್ದರಿಂದ ಬಿಜೆಪಿ ಗೆಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕು. ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.