ಓದಿರುವುದು ಎಸ್ಸೆಸ್ಸೆಲ್ಸಿವರೆಗಷ್ಟೇ. ಸಾಧನೆಯಲ್ಲಿ ಅವರದು ಎತ್ತರದ ಸ್ಥಾನ. ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ ನೇತ್ರದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿದ್ದಾರೆ. ಜಿಲ್ಲೆಯಲ್ಲಷ್ಟೇ ಅಲ್ಲದೆ ಆಂಧ್ರಪ್ರದೇಶದ ಅನಂತಪುರ, ಹಿಂದೂಪುರ, ಮಡಕಶಿರಾ ಭಾಗದಲ್ಲೂ ಮೃತರ ಕಣ್ಣುಗಳನ್ನು ಹೊರತೆಗೆದು ನೇತ್ರ ಕೇಂದ್ರಗಳಿಗೆ ರವಾನಿಸಿದ್ದಾರೆ.