ಗಾಂಧೀಜಿ ಕುರಿತ ಪುಸ್ತಕ ಬಿಡುಗಡೆ
ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಅ.2 ರಂದು ಬೆಳಿಗ್ಗೆ 11ಕ್ಕೆ ವಿಶೇಷ ಉಪನ್ಯಾಸ ಹಾಗೂ ಗಾಂಧೀಜಿ ಕುರಿತ ಕನ್ನಡ ಪುಸ್ತಕ ಬಿಡುಗಡೆ ಸಮಾರಂಭ. ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರದ ಮಂಡಗದ್ದೆ ಶ್ರೀನಿವಾಸಯ್ಯ ಅವರು ಉಪನ್ಯಾಸ ನೀಡಲಿದ್ದಾರೆ. ಯುನೆಸ್ಕೊ ಫೆಲೋ ಡಾ.ಚೂಡಾಮಣಿ ನಂದಗೋಪಾಲ್ ಮತ್ತು ಸಾಹಿತಿ ರಾಮನಾಥ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ದಿನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದೆ ಇಂದುಶ್ರೀ ರವೀಂದ್ರ ಅವರು ಮಾತನಾಡುವ ಗೊಂಬೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.