ಸಮ್ಮಿಶ್ರ ಸರ್ಕಾರದ ಆದ್ಯತೆ, ಗುರಿ ಹಾಗೂ ಉದ್ದೇಶಗಳಿಗೆ ಅನುಗುಣವಾಗಿ 2018–19ನೇ ಸಾಲಿನ ಬಜೆಟನ್ನು ಹೊಸದಾಗಿ ಮಂಡಿಸಬೇಕಿದೆ. ಹೀಗಾಗಿ, ಎಲ್ಲಾ ಮುಂದುವರಿದ ಯೋಜನೆಗಳಿಗೆ ಲೇಖಾನುದಾನ ಪಡೆದಿರುವ ಮಿತಿಗಿಂತ ಹೆಚ್ಚು ಅನುದಾನ ನೀಡಬಾರದು. ಚಾಲ್ತಿ ಇರುವ ಕಾರ್ಯಕ್ರಮಗಳಿಗೆ ಹಣ ಬಿಡುಗಡೆಗೆ ಮುನ್ನ ಮುಖ್ಯಮಂತ್ರಿ ಅವರ ಪೂರ್ವಾನುಮೋದನೆ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.