ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿತ್ತು. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಆದರೆ, ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ಅವರು ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿ ಮಾಡಲು ಮುಂದಾಗಿದೆ ಎಂಬ ಆರೋಪ ಬಿಜೆಪಿ ವಿರುದ್ಧ ಕೇಳಿಬಂದಿತ್ತು. ಅಂತಹ ಸಂದರ್ಭದಲ್ಲಿ ಪಕ್ಷದ ಶಾಸಕರನ್ನು ರೆಸಾರ್ಟ್ನಲ್ಲಿ ಜತೆಯಾಗಿರುವಂತೆ ಮಾಡಿದ್ದಲ್ಲದೆ, ಬಿಜೆಪಿ ಸಂಪರ್ಕಕ್ಕೆ ಸಿಗದಂತೆ ಮಾಡಿ ಬಿಜೆಪಿ ಸರ್ಕಾರ ರಚಿಸದಂತೆ ಮಾಡುವಲ್ಲಿ ಶಿವಕುಮಾರ್ ಪ್ರಮುಖ ಪಾತ್ರವಹಿಸಿದ್ದರು. ಈ ವಿಷಯ, ಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಸಾಧಿಸಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಟ್ವಿಟರ್ನಲ್ಲಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.