ವಿಮರ್ಶಕ ಕೆ.ನರಸಿಂಹಮೂರ್ತಿ ಅವರು ಕನ್ನಡದ ಶ್ರೇಷ್ಠ ಕಥೆಗಳಲ್ಲಿ ಆಯ್ದ 12 ಕಥೆಗಳನ್ನು ಈ ಕೃತಿಯಲ್ಲಿ ಸಂಪಾದಿಸಿಕೊಟ್ಟಿದ್ದಾರೆ. ಈ ಕೃತಿ ಈಗ ಮರುಮುದ್ರಣಗೊಂಡು ಓದುಗರ ಕೈಸೇರುತ್ತಿದೆ. ಸಾಹಿತ್ಯದ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಕೃತಿ. ಅಲ್ಲದೆ, ಕಥಾಪ್ರಿಯರ ಓದುವ ಆಸಕ್ತಿಯನ್ನು ತಣಿಸುವಷ್ಟು ಸಾಮರ್ಥ್ಯ ಈ ಕಥೆಗಳಲ್ಲಿವೆ. ಬಸವರಾಜಕಟ್ಟೀಮನಿಯವರ ‘ಗಿರಿಜಾ ಕಂಡ ಸಿನಿಮಾ’, ಚದುರಂಗರ ‘ನಾಲ್ಕು ಮೊಳ ಭೂಮಿ’, ಅನುಪಮಾ ಅವರ ‘ದೇವರೇ ಬರಲಿಲ್ಲ’, ಎಲ್.ಎಸ್.ಶೇಷಗಿರಿರಾವ್ ಅವರ ‘ಮುಯ್ಯಿ’, ಸದಾಶಿವ ಅವರ ‘ನಲ್ಲಿಯಲ್ಲಿ ನೀರು ಬಂದಿತು!!!’ ಕಥೆಗಳು ಮತ್ತೆ ಮತ್ತೇ ಓದಿಸಿಕೊಳ್ಳುತ್ತವೆ. ಅಲ್ಲಲ್ಲಿಕಾಗುಣಿತ ದೋಷಗಳು ಉಳಿದಿರುವುದನ್ನು ಹೊರತುಪಡಿಸಿದರೆ, ಪ್ರತಿಯೊಬ್ಬರ ಮನೆಯ ಕಪಾಟಿನಲ್ಲಿ ಇರಲೇಬೇಕಾದ ಕೃತಿ ಇದು.