ಈ ಕೃತಿಯಲ್ಲಿ35 ಅಧ್ಯಾಯಗಳಿವೆ. ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಳ್ಳಲು ಬೇಕಾದ ಸಮಗ್ರ ಮಾಹಿತಿಯನ್ನು ಲೇಖಕರು ಕಟ್ಟಿಕೊಟ್ಟಿದ್ದಾರೆ. ಅಂಬೇಡ್ಕರ್ ಅವರ ಹೆಜ್ಜೆ ಗುರುತುಗಳನ್ನು, ಅವರ ಜೀವನಯಾನದ ಪ್ರತಿ ಘಟನೆಯನ್ನೂ ಕಾಲಾನುಕ್ರಮಣಿಕೆಯಲ್ಲಿ ನಿರೂಪಿಸಿದ್ದಾರೆ. ಇದರಲ್ಲಿ ಬಳಕೆ ಮಾಡಿರುವ ಸಂದರ್ಭೋಚಿತ ಚಿತ್ರಗಳು ಕೃತಿಗೆ ಅಂದ ತಂದುಕೊಟ್ಟಿವೆ. ಸರಳ ಭಾಷೆ, ಆಕರ್ಷಕ ನಿರೂಪಣೆಯಿಂದ ಕೃತಿ ಸರಾಗವಾಗಿ ಓದಿಸಿಕೊಳ್ಳುತ್ತದೆ. ಇದೊಂದು ಕನ್ನಡಕ್ಕೆ ಅಪರೂಪದ ಕೃತಿ ಎನ್ನಬಹುದು.