ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನಾರ್‌ ವೃಕ್ಷದ ಅಳು

Last Updated 28 ಮಾರ್ಚ್ 2020, 19:30 IST
ಅಕ್ಷರ ಗಾತ್ರ

‘ಚಿನಾರ್‌ ವೃಕ್ಷದ ಅಳು’ ಕಥಾ ಸಂಕಲನ ವಿಭಿನ್ನ ಹನ್ನೊಂದು ಆಯ್ದ ಕಥೆಗಳನ್ನೊಳಗೊಂಡಿದೆ. ಭಾರತದ ವಿವಿಧ ಭಾಷೆಗಳಲ್ಲಿನ ಸಣ್ಣಕಥೆಗಳನ್ನು ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ.

ವರ್ತಮಾನದ ಬದುಕಿನ ವಿವಿಧ ತಲ್ಲಣಗಳನ್ನು ಕಟ್ಟಿಕೊಡುವ ಈ ಸಂಕಲನವು ಮನುಕುಲದ ಸ್ಥಿತಿ–ಗತಿಯನ್ನು ತೆರೆದಿಡುತ್ತದೆ.

ಶೀರ್ಷಿಕೆಯೇ ಧ್ವನಿಸುವಂತೆ ಒಂದು ತಲ್ಲಣದ ಕಥೆ ಇದರಲ್ಲಿ ಅಡಗಿದೆ. ಕಾಶ್ಮೀರಿ ಜನತೆಯ ಬದುಕಿನಲ್ಲಿ ಚಿನಾರ್‌ ವೃಕ್ಷ ಬಹಳ ಅಮೂಲ್ಯವಾದದ್ದು. ಕಾಶ್ಮೀರಿ ಸಂಸ್ಕೃತಿಯ ಒಂದು ಭಾಗ ಈ ವೃಕ್ಷ. ಈ ಮರದ ಅವಸಾನದ ನೋವನ್ನು ತಮ್ಮ ಸಂಕಲನದಲ್ಲಿ ಸೇರಿಸಿದ್ದಾರೆ. ಇಂತಹ ಸತ್ಯಗಳು ಮತ್ತು ರಹಸ್ಯಗಳು ಓದುಗನ ಕುತೂಹಲ ಇಮ್ಮಡಿಗೊಳಿಸುತ್ತವೆ.

ಧರ್ಮದ ಮೇಲೆ ಪ್ರಭಾವ ಬೀರುವ ಸನ್ನಿವೇಶಗಳು, ಧರ್ಮ ಮತ್ತು ಮನುಷ್ಯನ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನೂ ಈ ಸಂಕಲನದ ಮತ್ತೊಂದು ಕಥೆ ನಿರೂಪಿಸಿದೆ. ಹೀಗೆ ಹನ್ನೊಂದು ಕಥೆಗಳೂ ವಿಭಿನ್ನ ನೆಲೆಗಟ್ಟಿನಲ್ಲಿ, ಮನುಕುಲ, ಸಮಾಜ, ಆಧುನಿಕತೆ ಮತ್ತು ಇವುಗಳ ಪ್ರಭಾವವನ್ನು ಪಾತ್ರಸಹಿತ ವಿವರುಸುತ್ತಾ ಓದುಗನನ್ನು ಚಿಂತನೆಗೆ ಹಚ್ಚಿಬಿಡುತ್ತದೆ.

ಆಧುನಿಕತೆಗೆ ತೆರೆದುಕೊಂಡಾಗಿನಿಂದ ಮಾನವನ ಜೀವನ ಶೈಲಿಯಲ್ಲಿ ಬದಲಾವಣೆಗಳು ಹೆಚ್ಚಾದವು. ಬದುಕುವ ರೀತಿಯಲ್ಲಿ ಹೊಸತನ ಇದ್ದರೂ ಅದು ನಕಲಿಯೇನೊ ಎಂಬಂತಾಗಿದೆ. ಮೂಲ ಆಚಾರ–ವಿಚಾರ, ಸಂಪನ್ಮೂಲಗಳನ್ನು ಕಳೆದುಕೊಳ್ಳುತ್ತಾ ತಾಂತ್ರಿಕ ಯುಗದ ಬಂಧನದಲ್ಲಿ ಬಿಗಿಯಾಗಿದ್ದಾನೆ. ಇಂತಹ ಹಲವಾರು ಸಂಕೋಲೆಗಳನ್ನು ಕೃತಿ ತೆರೆದಿಟ್ಟಿದೆ.

***

ಪು: ಚಿನಾರ್‌ ವೃಕ್ಷದ ಅಳು

ಲೇ: ಡಾ.ಬಸವರಾಜ ಸಾದರ

ಪು: 96

ಬೆ: ₹100

ಪ್ರ: ನವಕರ್ನಾಟಕ ಪಬ್ಲಿಕೇಷನ್ಸ್‌ ಪ್ರೈವೆಟ್‌ ಲಿಮಿಟೆಡ್‌

ಮೊ: 080–22161900

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT