ಕಿ.ರಂ. ಎಂಬ ವಿಮರ್ಶಾ ಪ್ರತಿಭೆ ಸೃಷ್ಟಿಸಿದ ಸಾಂಸ್ಕೃತಿಕ ಸಂಚಲನದ ಅಗಾಧತೆಯನ್ನು ಅರಿಯಲು ಡಾ. ಶಿವರಾಜ ಬ್ಯಾಡರಹಳ್ಳಿ ಅವರ ‘ನುಡಿಬೆಡಗು’ ಕೃತಿ ಸಹಾಯ ಮಾಡುತ್ತದೆ. ಕಿ.ರಂ ಅವರು ನೀಲು ಕವಿತೆಗಳು, ಅಡಿಗರ ಕವಿತೆಗಳು, ಚಂದ್ರಶೇಖರ ಕಂಬಾರ ಅವರ ‘ಸಿರಿ ಸಂಪಿಗೆ’, ಅಂಕುರ್ ಬೆಟಗೇರಿ ಅವರ ‘ಹಳದಿ ಪುಸ್ತಕ’ ಸೇರಿ ಹಲವು ಕೃತಿಗಳಿಗೆ ಸಂಬಂಧಿಸಿದಂತೆ ಮಾಡಿದ ವಿಮರ್ಶಾ ಗುಚ್ಛ ಇಲ್ಲಿದೆ. ಜತೆಗೆ ಅವರ ಆಯ್ದ ಭಾಷಣಗಳನ್ನು ಸಂಪಾದಿಸಲಾಗಿದೆ.