ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಜೆ.ನರಸಿಂಹಮೂರ್ತಿ, ‘ಮಾದಿಗ ಜನಾಂಗ ರಾಜ್ಯದ ಬಹುದೊಡ್ಡ ಸಮುದಾಯವಾಗಿದೆ. ಈ ಅವಕಾಶ ವಂಚಿತ ಸಮುದಾಯವು ತೀವ್ರ ಶೋಷಣೆಗೂ ಒಳಗಾಗುತ್ತಿದೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಇಲ್ಲದಿದ್ದಲ್ಲಿ ಮುಂಬ ರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿರಲು ತೀರ್ಮಾನಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.