<p><strong>ಬೆಂಗಳೂರು:</strong> ಸಮುದ್ರದ ನೀರನ್ನು ಶುದ್ಧೀಕರಿಸಿ ಸಾರ್ವಜನಿಕರಿಗೆ ಪೂರೈಸುವ ಮಹತ್ವದ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.</p>.<p>₹806 ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಈ ಘಟಕದಲ್ಲಿ ಪ್ರತಿನಿತ್ಯ 10 ಕೋಟಿ ಲೀಟರ್ ಶುದ್ಧೀಕರಿಸಬಹುದು. ಈ ಕುರಿತು ತಾಂತ್ರಿಕ, ಕಾರ್ಯಸಾಧ್ಯತಾ ವಿವರಗಳಿರುವ ಸಮಗ್ರ ಯೋಜನಾ ವರದಿಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ನಗರ ಪ್ರದೇಶಗಳ ಕುಡಿಯುವ ನೀರಿನ ಬೇಡಿಕೆ ಪೂರೈಸಲು ಪರ್ಯಾಯ ಮಾರ್ಗಗಳ ಹುಡುಕಾಟ ನಡೆದಿದೆ. ಇದರ ಭಾಗವಾಗಿ ಸಮುದ್ರದ ನೀರನ್ನು ಶುದ್ಧೀಕರಿಸಿ ಪೂರೈಸುವ ಚಿಂತನೆ ಸರ್ಕಾರದ್ದಾಗಿದೆ.</p>.<p><strong>21 ಸಮುದಾಯದವರಿಗೆ ಜಮೀನು</strong></p>.<p>ಬೆಂಗಳೂರು ನಗರ ಪೂರ್ವ ತಾಲ್ಲೂಕಿನ ಬಿದರಹಳ್ಳಿಯಲ್ಲಿರುವ 203 ಎಕರೆ ಸರ್ಕಾರಿ ಜಮೀನಿನಲ್ಲಿ 21 ಎಕರೆ ಜಮೀನನ್ನು ವಿವಿಧ ಜಾತಿ ಸಂಘಟನೆಗಳಿಗೆ ಹಂಚಿಕೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಪೈಕಿ ಕರ್ನಾಟಕ ಬಲಿಜ ಸಂಘ, ತೊಗಟವೀರ ಕ್ಷತ್ರಿಯ, ರಾಜು ಕ್ಷತ್ರಿಯ, ಹಂದಿ ಜೋಗಿ, ಹೆಳವರು, ಶಿಳ್ಳೇಕ್ಯಾತ ಸಮುದಾಯದವರ ಸಂಘಗಳಿಗೆ ಭೂಮಿ ಹಂಚಿಕೆ ಮಾಡಲಾಗಿದೆ.</p>.<p><strong>ಮಣಿಕಂಠನ್ ಪತ್ನಿಗೆ ಉದ್ಯೋಗ</strong></p>.<p>ನಾಗರಹೊಳೆ ಹುಲಿ ರಕ್ಷಿತ ಅರಣ್ಯದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಪತ್ನಿಗೆ ಎ ಗ್ರೂಪ್ ನೌಕರಿ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p>ಅವರ ಮಕ್ಕಳು ಸ್ನಾತಕೋತ್ತರ ಪದವಿ ಪೂರ್ಣಗೊಳಿಸುವವರೆಗೆ ಎಲ್ಲ ವೆಚ್ಚ ಭರಿಸಲು ₹50 ಲಕ್ಷ ನಿಶ್ಚಿತ ನಿಧಿ ಇಡಲು ಸಭೆ ಒಪ್ಪಿಗೆ ಸೂಚಿಸಿದೆ.</p>.<p><strong>ಸಂಪುಟ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಧಾರಗಳು:</strong></p>.<p>*ಸೌರಶಕ್ತಿ ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡುವ ‘ಸೌರನೀತಿ’ಗೆ ಸಮ್ಮತಿ.</p>.<p>*ಇಲ್ಲಿನ ಜಕ್ಕೂರು ಸಮೀಪ ₹62.40 ಕೋಟಿ ವೆಚ್ಚದಲ್ಲಿ ಪಂಚಾಯತ್ ಭವನ ನಿರ್ಮಾಣ ಮಾಡುವ ಯೋಜನೆಗೆ ಅನುಮೋದನೆ.</p>.<p>*ಕಲಬುರ್ಗಿ ಜಿಲ್ಲೆ ಜೇವರ್ಗಿ ಪಟ್ಟಣಕ್ಕೆ ₹12.50 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಯೋಜನೆಗೆ ಒಪ್ಪಿಗೆ.</p>.<p>*ತುಮಕೂರು ಜಿಲ್ಲಾ ಶಿರಾ ತಾಲ್ಲೂಕಿನ ಬಾರಂಗಿಯಲ್ಲಿ 20 ಎಕರೆ ಭೂಮಿಯಲ್ಲಿ ಶಿಥಲೀಕರಣ ಘಟಕ ಸ್ಥಾಪಿಸುವ ಯೋಜನೆಗೆ ಸಮ್ಮತಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೂಮಿ ಹಸ್ತಾಂತರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮುದ್ರದ ನೀರನ್ನು ಶುದ್ಧೀಕರಿಸಿ ಸಾರ್ವಜನಿಕರಿಗೆ ಪೂರೈಸುವ ಮಹತ್ವದ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.</p>.<p>₹806 ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಈ ಘಟಕದಲ್ಲಿ ಪ್ರತಿನಿತ್ಯ 10 ಕೋಟಿ ಲೀಟರ್ ಶುದ್ಧೀಕರಿಸಬಹುದು. ಈ ಕುರಿತು ತಾಂತ್ರಿಕ, ಕಾರ್ಯಸಾಧ್ಯತಾ ವಿವರಗಳಿರುವ ಸಮಗ್ರ ಯೋಜನಾ ವರದಿಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ನಗರ ಪ್ರದೇಶಗಳ ಕುಡಿಯುವ ನೀರಿನ ಬೇಡಿಕೆ ಪೂರೈಸಲು ಪರ್ಯಾಯ ಮಾರ್ಗಗಳ ಹುಡುಕಾಟ ನಡೆದಿದೆ. ಇದರ ಭಾಗವಾಗಿ ಸಮುದ್ರದ ನೀರನ್ನು ಶುದ್ಧೀಕರಿಸಿ ಪೂರೈಸುವ ಚಿಂತನೆ ಸರ್ಕಾರದ್ದಾಗಿದೆ.</p>.<p><strong>21 ಸಮುದಾಯದವರಿಗೆ ಜಮೀನು</strong></p>.<p>ಬೆಂಗಳೂರು ನಗರ ಪೂರ್ವ ತಾಲ್ಲೂಕಿನ ಬಿದರಹಳ್ಳಿಯಲ್ಲಿರುವ 203 ಎಕರೆ ಸರ್ಕಾರಿ ಜಮೀನಿನಲ್ಲಿ 21 ಎಕರೆ ಜಮೀನನ್ನು ವಿವಿಧ ಜಾತಿ ಸಂಘಟನೆಗಳಿಗೆ ಹಂಚಿಕೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಪೈಕಿ ಕರ್ನಾಟಕ ಬಲಿಜ ಸಂಘ, ತೊಗಟವೀರ ಕ್ಷತ್ರಿಯ, ರಾಜು ಕ್ಷತ್ರಿಯ, ಹಂದಿ ಜೋಗಿ, ಹೆಳವರು, ಶಿಳ್ಳೇಕ್ಯಾತ ಸಮುದಾಯದವರ ಸಂಘಗಳಿಗೆ ಭೂಮಿ ಹಂಚಿಕೆ ಮಾಡಲಾಗಿದೆ.</p>.<p><strong>ಮಣಿಕಂಠನ್ ಪತ್ನಿಗೆ ಉದ್ಯೋಗ</strong></p>.<p>ನಾಗರಹೊಳೆ ಹುಲಿ ರಕ್ಷಿತ ಅರಣ್ಯದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಪತ್ನಿಗೆ ಎ ಗ್ರೂಪ್ ನೌಕರಿ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p>ಅವರ ಮಕ್ಕಳು ಸ್ನಾತಕೋತ್ತರ ಪದವಿ ಪೂರ್ಣಗೊಳಿಸುವವರೆಗೆ ಎಲ್ಲ ವೆಚ್ಚ ಭರಿಸಲು ₹50 ಲಕ್ಷ ನಿಶ್ಚಿತ ನಿಧಿ ಇಡಲು ಸಭೆ ಒಪ್ಪಿಗೆ ಸೂಚಿಸಿದೆ.</p>.<p><strong>ಸಂಪುಟ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಧಾರಗಳು:</strong></p>.<p>*ಸೌರಶಕ್ತಿ ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡುವ ‘ಸೌರನೀತಿ’ಗೆ ಸಮ್ಮತಿ.</p>.<p>*ಇಲ್ಲಿನ ಜಕ್ಕೂರು ಸಮೀಪ ₹62.40 ಕೋಟಿ ವೆಚ್ಚದಲ್ಲಿ ಪಂಚಾಯತ್ ಭವನ ನಿರ್ಮಾಣ ಮಾಡುವ ಯೋಜನೆಗೆ ಅನುಮೋದನೆ.</p>.<p>*ಕಲಬುರ್ಗಿ ಜಿಲ್ಲೆ ಜೇವರ್ಗಿ ಪಟ್ಟಣಕ್ಕೆ ₹12.50 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಯೋಜನೆಗೆ ಒಪ್ಪಿಗೆ.</p>.<p>*ತುಮಕೂರು ಜಿಲ್ಲಾ ಶಿರಾ ತಾಲ್ಲೂಕಿನ ಬಾರಂಗಿಯಲ್ಲಿ 20 ಎಕರೆ ಭೂಮಿಯಲ್ಲಿ ಶಿಥಲೀಕರಣ ಘಟಕ ಸ್ಥಾಪಿಸುವ ಯೋಜನೆಗೆ ಸಮ್ಮತಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೂಮಿ ಹಸ್ತಾಂತರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>