<p>ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ...</p>.<p>ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಈ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಗಳೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?</p>.<p>ಇಂಗ್ಲಿಷಿನ ಸ್ಥಾನದಲ್ಲಿ ಹಿಂದಿಯನ್ನು ತಂದು ಕೂರಿಸಬೇಕೆಂಬುದು ಹಿಂದಿವಾದಿಗಳ ಸಂಚು. ಇದನ್ನು ಕನ್ನಡಿಗರು ಪ್ರತಿಭಟಿಸಿ ವಿಫಲಗೊಳಿಸಬೇಕು. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕಾಗಿ ರಾಜ್ಯ ಸರ್ಕಾರ ಹಿಂದಿ ವಿಶ್ವವಿದ್ಯಾನಿಲಯ ಸ್ಥಾಪನೆಯೇ ಮುಂತಾದ ಅವಿವೇಕದ ಕಾರ್ಯಗಳಿಗೆ ಕೈಹಾಕಿ ಕನ್ನಡಿಗರ ಹಿತವನ್ನು ಬಲಿಕೊಡಬಾರದು.</p>.<p>ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ.</p>.<p><strong><span class="Bullet">l</span>ವಿಚಾರ ಕ್ರಾಂತಿಗೆ ಆಹ್ವಾನ ಪುಸ್ತಕದ, ಕುವೆಂಪು ಅವರ‘ಕರ್ನಾಟಕ: ಇಟ್ಟ ಹೆಸರು ಕೊಟ್ಟ ಮಂತ್ರ’ ಲೇಖನದ ಆಯ್ದ ಭಾಗಗಳು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ...</p>.<p>ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಈ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಗಳೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?</p>.<p>ಇಂಗ್ಲಿಷಿನ ಸ್ಥಾನದಲ್ಲಿ ಹಿಂದಿಯನ್ನು ತಂದು ಕೂರಿಸಬೇಕೆಂಬುದು ಹಿಂದಿವಾದಿಗಳ ಸಂಚು. ಇದನ್ನು ಕನ್ನಡಿಗರು ಪ್ರತಿಭಟಿಸಿ ವಿಫಲಗೊಳಿಸಬೇಕು. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕಾಗಿ ರಾಜ್ಯ ಸರ್ಕಾರ ಹಿಂದಿ ವಿಶ್ವವಿದ್ಯಾನಿಲಯ ಸ್ಥಾಪನೆಯೇ ಮುಂತಾದ ಅವಿವೇಕದ ಕಾರ್ಯಗಳಿಗೆ ಕೈಹಾಕಿ ಕನ್ನಡಿಗರ ಹಿತವನ್ನು ಬಲಿಕೊಡಬಾರದು.</p>.<p>ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ.</p>.<p><strong><span class="Bullet">l</span>ವಿಚಾರ ಕ್ರಾಂತಿಗೆ ಆಹ್ವಾನ ಪುಸ್ತಕದ, ಕುವೆಂಪು ಅವರ‘ಕರ್ನಾಟಕ: ಇಟ್ಟ ಹೆಸರು ಕೊಟ್ಟ ಮಂತ್ರ’ ಲೇಖನದ ಆಯ್ದ ಭಾಗಗಳು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>