ಬೆಂಗಳೂರು: ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿಇಂದು ರಾತ್ರಿ 10.30 ಗಂಟೆಯಿಂದ ಮಧ್ಯರಾತ್ರಿವರೆಗೆ ‘ದೇಶಕ್ಕಾಗಿ ಹೋರಾಡಿದವರಿಗೆ ನಮನ’ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ‘ಏ ಮೇರೇ ವತನ್ ಕೆ ಲೋಗೋಂ’ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗಾಯಕಿ ಸಂಗೀತಾ ಕಟ್ಟಿ ಕುಲಕರ್ಣಿ ಗಾನ ಸುಧೆ ಹರಿಸುತ್ತಿದ್ದಾರೆ. ಅವರಿಗೆ ಕೀಬೋರ್ಡ್ನಲ್ಲಿ ಕೃಷ್ಣ ಉಡುಪ, ತಬಲಾದಲ್ಲಿ ಪ್ರದ್ಯುಮ್ನ ಹಾಗೂ ಅಭಿಷೇಕ್ ಅವರು ರಿದಂ ಪ್ಯಾಡ್ ಮೂಲಕ ಸಾಥ್ ನೀಡುತ್ತಿದ್ದಾರೆ.