ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಶಾಸ್ತ್ರೀಯ ಸಂಗೀತ ಗಾಯಕ ಟಿ.ವಿ. ಶಂಕರನಾರಾಯಣನ್ ನಿಧನ

Last Updated 3 ಸೆಪ್ಟೆಂಬರ್ 2022, 7:28 IST
ಅಕ್ಷರ ಗಾತ್ರ

ಚೆನ್ನೈ: ಕರ್ಣಾಟಕ ಸಂಗೀತ ಗಾಯಕ ಟಿ.ವಿ ಶಂಕರನಾರಾಯಣನ್‌ ಅವರು ಶುಕ್ರವಾರ ಸಂಜೆ ಚೆನ್ನೈನಲ್ಲಿ ನಿಧನರಾಗಿದ್ದಾರೆ.

ಅವರಿಗೆ 77 ವರ್ಷ ವಯಸ್ಸಾಗಿತ್ತು. ಪತ್ನಿ, ಮಗ ಮತ್ತು ಮಗಳನ್ನು ಅವರು ಅಗಲಿದ್ದಾರೆ.

ಕರ್ಣಾಟಕ ಸಂಗೀತದ ಮೇರು ಶಿಖರ ಎನಿಸಿದ್ದ ಮಧುರೈ ಮಣಿ ಅಯ್ಯರ್ ಶೈಲಿಯಲ್ಲಿ ಹಾಡುತ್ತಿದ್ದ ಟಿ.ವಿ.ಶಂಕರನಾರಾಯಣನ್ ಅವರು 2003 ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ವೆಂಬು ಅಯ್ಯರ್‌ ಅವರ ಮಗನಾದ ಶಂಕರನಾರಾಯಣನ್ ಅವರು ಮಣಿ ಅಯ್ಯರ್ ಅವರ ಸೋದರ ಸಂಬಂಧಿಯೂ ಹೌದು.

ಪದ್ಮಭೂಷಣ ಪ್ರಶಸ್ತಿ, ಸಂಗೀತ ಕಲಾನಿಧಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಹಲವಾರು ಗೌರವಗಳು ಟಿ. ವಿ. ಶಂಕರನಾರಾಯಣನ್ ಅವರಿಗೆ ಸಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT