ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ ಕವನ ಸ್ಪರ್ಧೆ: ತೀರ್ಪುಗಾರರ ಮೆಚ್ಚುಗೆ ಪಡೆದ ಕವನ– ಗಜ಼ಲ್

Last Updated 13 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಈ ವ್ಯವಸ್ಥೆ ನನ್ನ ಕಣ್ಣು ಕಟ್ಟಿದೆ ಏನು ಮಾಡಲಿ
ಆ ಆವಸ್ಥೆ ನನ್ನ ನಾಲಿಗೆ ಸುಟ್ಟಿದೆ ಏನು ಮಾಡಲಿ

ಲೆಕ್ಕಣಿಕೆಗೆ ಕ್ರಾಂತಿಯ ಭಾಷೆ ಕಲಿಸಬೇಕಾದ ತುರ್ತು
ನೆತ್ತರು ಶಾಯಿಯಾಗಿ ಹೆಪ್ಪುಗಟ್ಟಿದೆ ಏನು ಮಾಡಲಿ

ಶಾಂತಿಯ ತೋಟದಲಿ ಸಾವಿನಾ ಆರ್ಭಟ ನೋಡು
ಆಕ್ರಂದನ ಮುಗಿಲು ಮುಟ್ಟಿದೆ ಏನು ಮಾಡಲಿ

ದೇಶ ಸುಡುವಾಗ ಪಿಟೀಲು ನುಡಿಸಿದ ರೋಮ ದೊರೆ
ಬಡಪ್ರಜೆಗಳ ಕಣ್ಣೀರು ಶಾಪ ತಟ್ಟಿದೆ ಏನು ಮಾಡಲಿ

ಸಾವಿನ ಸಂತೆಯಲಿ ಸೌದಾಗರ*ರದೆ ಅಧಿಪತ್ಯ
ಮಿಥ್ಯ ಮಾನವೀಯತೆ ಮೆಟ್ಟಿದೆ ಏನು ಮಾಡಲಿ

ಅನ್ನ ಹಾಕುವ ಪ್ರಭುಗೆ ಋಣಿಯಾಗಿರಬೇಕು ಪೀರ್
ಬೇಲಿಯೇ ಹೊಲಕೆ ಕೊಳ್ಳಿ ಇಟ್ಟಿದೆ ಏನು ಮಾಡಲಿ.

(* ವ್ಯಾಪಾರಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT