ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಪ್ರತಿಭಟನೆ: ತಮಿಳುನಾಡಿನಲ್ಲಿ ಸಂಚಾರ ವ್ಯತ್ಯಯ

Last Updated 5 ಏಪ್ರಿಲ್ 2018, 9:59 IST
ಅಕ್ಷರ ಗಾತ್ರ

ಚೆನ್ನೈ: ಡಿಎಂಕೆ ಹಾಗೂ ಇತರೆ ವಿರೋಧ ಪಕ್ಷಗಳು ‘ಕಾವೇರಿ ನಿರ್ವಹಣಾ ಮಂಡಳಿ’ ರಚನೆಗೆ ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವುದರಿಂದಾಗಿ ತಮಿಳುನಾಡಿನಲ್ಲಿ ಬಸ್‌ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯಗಳಾಗಿವೆ.

ತಮಿಳುನಾಡಿನಾದ್ಯಂತ ಸುಮಾರು 20ಕ್ಕೂ ಹೆಚ್ಚು ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರದಲ್ಲಿ 30–90 ನಿಮಿಷ ವಿಳಂಬವಾಗಿದೆ. ಚೆನ್ನೈನಲ್ಲಿ ನಗರ ಪಾಲಿಕೆಯ ಶೇ. 45ರಷ್ಟು ಬಸ್‌ಗ‌ಳ ಸಂಚಾರ ಸ್ಥಗಿತವಾಗಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ಬಂದ್‌ಗೆ ಬೆಂಬಲ ನೀಡಿರುವುದರಿಂದ ರಾಜ್ಯದಾದ್ಯಂತ ಸಂಚಾರ ಸಮಸ್ಯೆ ಉಂಟಾಗಿದೆ. ಓಲಾ, ಉಬೆರ್‌ನ ಸುಮಾರು 10 ಸಾವಿರಕ್ಕೂ ಹೆಚ್ಚು ಕಾರು ಚಾಲಕರು ಬಂದ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT