ಶಿಡ್ಲಘಟ್ಟ: ತಾಲ್ಲೂಕಿನ ಇರಗಪ್ಪನಹಳ್ಳಿಯಲ್ಲಿ ಗುರುವಾರ ವಿಶಿಷ್ಟ ಕೆತ್ತನೆಯ ಸೋಪಾನದ ಸಾಲಿನಿಂದ ಕೂಡಿದ ನೀರಿನ ಕೊಳದ ಬಳಿ ಗ್ರಾಮಸ್ಥರು ಪುರಾತನ ಸಂಸ್ಕೃತ ಭಾಷೆಯ ಶಾಸನವನ್ನು ಪತ್ತೆ ಹಚ್ಚಿದ್ದಾರೆ. ಗ್ರಾಮದ ಪಟೇಲ್ ಬೈರಾರೆಡ್ಡಿ ನೇತೃತ್ವದಲ್ಲಿ ಫಣಿಕುಮಾರ್, ಗೆರಿಗಪ್ಪ, ರಾಜಪ್ಪ, ಮುನಿರಾಜು, ಎಸ್.ವೆಂಕಟೇಶ್ ಮತ್ತಿತರರು ಬಸವನ ಮಂಟಪದ ಸ್ವಲ್ಪ ದೂರದಲ್ಲಿ ವಿಶಾಲವಾದ ಹೊಲದಲ್ಲಿ ಇರುವ ಕೊಳದ ಬಳಿ ಮಣ್ಣಿನಲ್ಲಿ ಹೂತುಹೋಗಿದ್ದ ಶಾಸನವನ್ನು ಹುಡುಕಿ ತೆಗೆದು, ಕಲ್ಲನ್ನು ತೊಳೆದಿಟ್ಟಿದ್ದಾರೆ.