ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಾಹಿತ್ಯವನ್ನು ಸರ್ಕಾರೀಕರಣಗೊಳಿಸುವ ಮತ್ತು ಕಾರ್ಪೊರೇಟರೀಕರಣಗೊಳಿಸುವ ಒಂದು ಕೆಟ್ಟ ಪದ್ಧತಿಯನ್ನು ಜಾರಿ ಮಾಡುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ ಕಾರಣವಾಗಿದೆ. ಇದರ ಬಗ್ಗೆ ನಾವು ಎಚ್ಚರಿಕೆ ಇಟ್ಟುಕೊಳ್ಳದೇ ಹೋದರೆ, ಮತ್ತೆ ನಾವು ತಪ್ಪು ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಕನ್ನಡ ಸಾಹಿತ್ಯ ಪರಿಷತ್ ವಿವೇಕವನ್ನು ಪ್ರತಿನಿಧಿಸುವ ಸಂಸ್ಥೆಯಾಗಬೇಕು. ಇಲ್ಲದಿದ್ದರೆ ಸಾಹಿತ್ಯ ಸಂವೇದನೆಯನ್ನು ಕಳೆದುಕೊಳ್ಳುತ್ತದೆ’ ಎಂದು ಅಸಮಾಧಾನ ಹೊರಹಾಕಿದರು.