<p><strong>ಬೆಂಗಳೂರು: `</strong>ಕನ್ನಡ ಸಾಹಿತ್ಯ ಲೋಕದ ದಿಗ್ಗಜರ ಸಾಕಷ್ಟು ಕೃತಿಗಳನ್ನು ಪ್ರಕಟಿಸಿರುವ ಮನೋಹರ ಗ್ರಂಥಮಾಲಾ ಪ್ರಕಾಶನವು ತನ್ನ ಪರಂಪರೆಯನ್ನು ಮುಂದುವರಿಸುತ್ತಿರುವುದು ಶ್ಲಾಘನೀಯ~ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮನೋಹರ ಗ್ರಂಥಮಾಲಾ ಸಂಸ್ಥೆಗೆ ಅತ್ಯುತ್ತಮ ಪ್ರಕಾಶನ ಸಂಸ್ಥೆಯ `ಅಂಕಿತ ಪುಸ್ತಕ~ ಪುರಸ್ಕಾರ ನೀಡಿ ಅವರು ಮಾತನಾಡಿದರು.<br /> <br /> `ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಅತಿಥಿಗಳಿಗೆ ಮಾಲಾರ್ಪಣೆ ಮಾಡುವ ಬದಲಿಗೆ ಉತ್ತಮ ಕೃತಿನೀಡುವಂತೆ ಸುತ್ತೋಲೆ ಹೊರಡಿಸಲಾಗಿದೆ. ಇತರೆ ಇಲಾಖೆಗಳು ಇದನ್ನೇ ಅನುಸರಿಸಿದರೆ ಸಾಹಿತ್ಯದ ಪ್ರಸಾರಕ್ಕೆ ಅನುಕೂಲವಾಗಲಿದೆ~ ಎಂದರು.<br /> <br /> ಅಭಿನಂದನಾ ನುಡಿಗಳನ್ನಾಡಿದ ಸಾಹಿತಿ ಶ್ರೀನಿವಾಸ ವೈದ್ಯ, `ಮನೋಹರ ಗ್ರಂಥಮಾಲಾ ಪ್ರಕಾಶನವನ್ನು ಜ್ಞಾನಪೀಠದ ಕಾರ್ಖಾನೆ ಎಂದರೆ ಅತಿಶಯೋಕ್ತಿ ಎನಿಸದು~ ಎಂದರು.ಅಂಕಿತ ಪುಸ್ತಕದ ವ್ಯವಸ್ಥಾಪಕ ಪ್ರಕಾಶ್ ಕಂಬತ್ತಳ್ಳಿ, `ಸಾಹಿತ್ಯ ಪ್ರಸಾರದಲ್ಲಿ ಪ್ರಕಾಶನ ಸಂಸ್ಥೆಗಳ ಪಾತ್ರ ಕೂಡ ಮಹತ್ವದ್ದಾಗಿದೆ. ಹಾಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಪ್ರಕಾಶನ ವಿಭಾಗವನ್ನು ಪರಿಗಣಿಸಬೇಕು~ ಎಂದು ಕೋರಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಆರ್.ಕೆ. ನಲ್ಲೂರು ಪ್ರಸಾದ್ಮಾತನಾಡಿದರು. ಮನೋಹರ ಗ್ರಂಥಮಾಲಾ ಪ್ರಕಾಶನದ ಮುಖ್ಯಸ್ಥ ರಮಾಕಾಂತ ಜೋಷಿ ಅವರಿಗೆ 15 ಸಾವಿರ ರೂಪಾಯಿ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಕನ್ನಡ ಸಾಹಿತ್ಯ ಲೋಕದ ದಿಗ್ಗಜರ ಸಾಕಷ್ಟು ಕೃತಿಗಳನ್ನು ಪ್ರಕಟಿಸಿರುವ ಮನೋಹರ ಗ್ರಂಥಮಾಲಾ ಪ್ರಕಾಶನವು ತನ್ನ ಪರಂಪರೆಯನ್ನು ಮುಂದುವರಿಸುತ್ತಿರುವುದು ಶ್ಲಾಘನೀಯ~ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮನೋಹರ ಗ್ರಂಥಮಾಲಾ ಸಂಸ್ಥೆಗೆ ಅತ್ಯುತ್ತಮ ಪ್ರಕಾಶನ ಸಂಸ್ಥೆಯ `ಅಂಕಿತ ಪುಸ್ತಕ~ ಪುರಸ್ಕಾರ ನೀಡಿ ಅವರು ಮಾತನಾಡಿದರು.<br /> <br /> `ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಅತಿಥಿಗಳಿಗೆ ಮಾಲಾರ್ಪಣೆ ಮಾಡುವ ಬದಲಿಗೆ ಉತ್ತಮ ಕೃತಿನೀಡುವಂತೆ ಸುತ್ತೋಲೆ ಹೊರಡಿಸಲಾಗಿದೆ. ಇತರೆ ಇಲಾಖೆಗಳು ಇದನ್ನೇ ಅನುಸರಿಸಿದರೆ ಸಾಹಿತ್ಯದ ಪ್ರಸಾರಕ್ಕೆ ಅನುಕೂಲವಾಗಲಿದೆ~ ಎಂದರು.<br /> <br /> ಅಭಿನಂದನಾ ನುಡಿಗಳನ್ನಾಡಿದ ಸಾಹಿತಿ ಶ್ರೀನಿವಾಸ ವೈದ್ಯ, `ಮನೋಹರ ಗ್ರಂಥಮಾಲಾ ಪ್ರಕಾಶನವನ್ನು ಜ್ಞಾನಪೀಠದ ಕಾರ್ಖಾನೆ ಎಂದರೆ ಅತಿಶಯೋಕ್ತಿ ಎನಿಸದು~ ಎಂದರು.ಅಂಕಿತ ಪುಸ್ತಕದ ವ್ಯವಸ್ಥಾಪಕ ಪ್ರಕಾಶ್ ಕಂಬತ್ತಳ್ಳಿ, `ಸಾಹಿತ್ಯ ಪ್ರಸಾರದಲ್ಲಿ ಪ್ರಕಾಶನ ಸಂಸ್ಥೆಗಳ ಪಾತ್ರ ಕೂಡ ಮಹತ್ವದ್ದಾಗಿದೆ. ಹಾಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಪ್ರಕಾಶನ ವಿಭಾಗವನ್ನು ಪರಿಗಣಿಸಬೇಕು~ ಎಂದು ಕೋರಿದರು.<br /> <br /> ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಆರ್.ಕೆ. ನಲ್ಲೂರು ಪ್ರಸಾದ್ಮಾತನಾಡಿದರು. ಮನೋಹರ ಗ್ರಂಥಮಾಲಾ ಪ್ರಕಾಶನದ ಮುಖ್ಯಸ್ಥ ರಮಾಕಾಂತ ಜೋಷಿ ಅವರಿಗೆ 15 ಸಾವಿರ ರೂಪಾಯಿ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>