<p><strong>ಬೀದರ್: </strong>‘ಕರ್ನಾಟಕ ಬಂದ್’ಗೆ ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಮುಚ್ಚಿದ್ದ ಅಂಗಡಿಗಳನ್ನು ತೆರೆಸಲು ಯತ್ನಿಸಿದರು. ಬಿಜೆಪಿ ಕಾರ್ಯಕರ್ತರು ಬೈಕ್ ಮೇಲೆ ಸಂಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರೆ ಜೆಡಿಎಸ್ ಕಾರ್ಯಕರ್ತರು ನಗರದ ಹಳೆಯ ಭಾಗದಲ್ಲಿ ಕೆಲ ಅಂಗಡಿಗಳನ್ನು ಮತ್ತೆ ತೆರೆಸುವುದಕ್ಕೆ ಪ್ರಯತ್ನಿಸಿದರು.<br /> <br /> ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸೂಚನೆ ಅರಿತ ಟೌನ್ ಠಾಣೆಯ ಪೊಲೀಸರು ಜೆಡಿಎಸ್ ಮುಖಂಡರಾದ ಬಾಬುರಾವ ಮಲ್ಕಾಪುರ, ಮಾರುತಿ ಬೌದ್ಧೆ, ಗಾಲೇಬ್ ಹಾಸ್ಮಿ ಸೇರಿದಂತೆ ಒಟ್ಟು 13 ಜನ ಕಾರ್ಯಕರ್ತರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಿದರು. <br /> <br /> <strong>ಬಂದೋಬಸ್ತ್: </strong>ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದ ವಿವಿಧೆಡೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬಂದ್ ವೇಳೆ ಅಹಿತಕರ ಘಟನೆ ನಡೆದ ಬಗ್ಗೆ ವರದಿ ಆಗಿಲ್ಲ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಕರ್ನಾಟಕ ಬಂದ್’ಗೆ ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಮುಚ್ಚಿದ್ದ ಅಂಗಡಿಗಳನ್ನು ತೆರೆಸಲು ಯತ್ನಿಸಿದರು. ಬಿಜೆಪಿ ಕಾರ್ಯಕರ್ತರು ಬೈಕ್ ಮೇಲೆ ಸಂಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರೆ ಜೆಡಿಎಸ್ ಕಾರ್ಯಕರ್ತರು ನಗರದ ಹಳೆಯ ಭಾಗದಲ್ಲಿ ಕೆಲ ಅಂಗಡಿಗಳನ್ನು ಮತ್ತೆ ತೆರೆಸುವುದಕ್ಕೆ ಪ್ರಯತ್ನಿಸಿದರು.<br /> <br /> ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸೂಚನೆ ಅರಿತ ಟೌನ್ ಠಾಣೆಯ ಪೊಲೀಸರು ಜೆಡಿಎಸ್ ಮುಖಂಡರಾದ ಬಾಬುರಾವ ಮಲ್ಕಾಪುರ, ಮಾರುತಿ ಬೌದ್ಧೆ, ಗಾಲೇಬ್ ಹಾಸ್ಮಿ ಸೇರಿದಂತೆ ಒಟ್ಟು 13 ಜನ ಕಾರ್ಯಕರ್ತರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಿದರು. <br /> <br /> <strong>ಬಂದೋಬಸ್ತ್: </strong>ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದ ವಿವಿಧೆಡೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬಂದ್ ವೇಳೆ ಅಹಿತಕರ ಘಟನೆ ನಡೆದ ಬಗ್ಗೆ ವರದಿ ಆಗಿಲ್ಲ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>