<p>ವಿಜಯಪುರ: ಸಮೀಪದ ಹೊಸನಲ್ಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಯಾವುದೇ ಅನುಮತಿ ಪಡೆಯದೆ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕೆಡವಿದ್ದು, ಇದನ್ನು ಖಂಡಿಸಿ ಮಂಗಳವಾರ ಸುವರ್ಣ ಕರ್ನಾಟಕ ಜನಪರ ಶಕ್ತಿ ವೇದಿಕೆ ಕಾರ್ಯಕರ್ತರು ಗ್ರಾಮದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.<br /> <br /> ವೇದಿಕೆಯ ಅಧ್ಯಕ್ಷ ಚಂದ್ರು ಮತ್ತು ಕಾಂಗ್ರೆಸ್ ಮುಖಂಡರು ಮಾತನಾಡಿ, ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರಾದ ಬಸವರಾಜು ಮತ್ತು ಕಿರಣ್ಕುಮಾರ್ ಮಾರ್ಚ್ 30ರಂದು ರಾತ್ರಿ ಯಾವುದೇ ಅನುಮತಿ ಪಡೆಯದೆ ಅಂಗನವಾಡಿ ಕಟ್ಟಡವನ್ನು ಕೆಡವಿದ್ದಾರೆ. ಈ ಸ್ವತ್ತನ್ನು ಖಾಸಗಿಯಾಗಿ ಬಳಸಿಕೊಳ್ಳುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. <br /> <br /> ಸರ್ಕಾರಕ್ಕೆ ಸೇರಿದ ಕಟ್ಟಡವನ್ನು ನೆಲಸಮ ಮಾಡಲು ಗ್ರಾ.ಪಂ.ಸದಸ್ಯರಿಗೆ ಅಧಿಕಾರವಿಲ್ಲ. ಅಲ್ಲದೆ ಇದಕ್ಕಾಗಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಿಂದ ಯಾವುದೇ ಅನುಮತಿಯನ್ನೂ ಪಡೆದಿಲ್ಲ ಎಂದು ದೂರಿದರು. <br /> <br /> ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜೇಗೌಡ, ತಹಶೀಲ್ದಾರ್ ಎಲ್.ಸಿ.ನಾಗರಾಜ್, ಸಿಡಿಪಿಒ ಅಶ್ವತ್ಥಮ್ಮ ಹಾಗೂ ಚನ್ನರಾಯಪಟ್ಟಣ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಈ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.<br /> <br /> ನಂತರ ನಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಂಜೇಗೌಡ ಮಾತನಾಡಿ, ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕಟ್ಟಡವನ್ನು 2 ವರ್ಷಗಳ ಹಿಂದೆಯೇ ನೆಲಸಮಗೊಳಿಸಲು ಸಿಡಿಪಿಒ ಆದೇಶ ನೀಡಿದ್ದರು. ತಾಲ್ಲೂಕು ಪಂಚಾಯಿತಿ ವತಿಯಿಂದ 3.50 ಲಕ್ಷ ರೂಪಾಯಿ ಅನುದಾನದಲ್ಲಿ ಆಗಲೇ ಹೊಸ ಕಟ್ಟಡವೂ ನಿರ್ಮಾಣವಾಗಿದೆ. ಹಳೆ ಕಟ್ಟಡವನ್ನು ಹಾಗೇ ಬಿಟ್ಟಿದ್ದು ಯಾರೋ ಕಿಡಿಗೇಡಿಗಳು ಪಂಚಾಯಿತಿ ಅನುಮತಿ ಇಲ್ಲದೆ ನೆಲಸಮಗೊಳಿಸಿದ್ದಾರೆ ಎಂದು ಹೇಳಿದರು. <br /> <br /> ಈ ಸಂಬಂಧ ಅವರು ಚನ್ನರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಸಮೀಪದ ಹೊಸನಲ್ಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಯಾವುದೇ ಅನುಮತಿ ಪಡೆಯದೆ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕೆಡವಿದ್ದು, ಇದನ್ನು ಖಂಡಿಸಿ ಮಂಗಳವಾರ ಸುವರ್ಣ ಕರ್ನಾಟಕ ಜನಪರ ಶಕ್ತಿ ವೇದಿಕೆ ಕಾರ್ಯಕರ್ತರು ಗ್ರಾಮದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.<br /> <br /> ವೇದಿಕೆಯ ಅಧ್ಯಕ್ಷ ಚಂದ್ರು ಮತ್ತು ಕಾಂಗ್ರೆಸ್ ಮುಖಂಡರು ಮಾತನಾಡಿ, ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರಾದ ಬಸವರಾಜು ಮತ್ತು ಕಿರಣ್ಕುಮಾರ್ ಮಾರ್ಚ್ 30ರಂದು ರಾತ್ರಿ ಯಾವುದೇ ಅನುಮತಿ ಪಡೆಯದೆ ಅಂಗನವಾಡಿ ಕಟ್ಟಡವನ್ನು ಕೆಡವಿದ್ದಾರೆ. ಈ ಸ್ವತ್ತನ್ನು ಖಾಸಗಿಯಾಗಿ ಬಳಸಿಕೊಳ್ಳುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. <br /> <br /> ಸರ್ಕಾರಕ್ಕೆ ಸೇರಿದ ಕಟ್ಟಡವನ್ನು ನೆಲಸಮ ಮಾಡಲು ಗ್ರಾ.ಪಂ.ಸದಸ್ಯರಿಗೆ ಅಧಿಕಾರವಿಲ್ಲ. ಅಲ್ಲದೆ ಇದಕ್ಕಾಗಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಿಂದ ಯಾವುದೇ ಅನುಮತಿಯನ್ನೂ ಪಡೆದಿಲ್ಲ ಎಂದು ದೂರಿದರು. <br /> <br /> ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜೇಗೌಡ, ತಹಶೀಲ್ದಾರ್ ಎಲ್.ಸಿ.ನಾಗರಾಜ್, ಸಿಡಿಪಿಒ ಅಶ್ವತ್ಥಮ್ಮ ಹಾಗೂ ಚನ್ನರಾಯಪಟ್ಟಣ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಈ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.<br /> <br /> ನಂತರ ನಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಂಜೇಗೌಡ ಮಾತನಾಡಿ, ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕಟ್ಟಡವನ್ನು 2 ವರ್ಷಗಳ ಹಿಂದೆಯೇ ನೆಲಸಮಗೊಳಿಸಲು ಸಿಡಿಪಿಒ ಆದೇಶ ನೀಡಿದ್ದರು. ತಾಲ್ಲೂಕು ಪಂಚಾಯಿತಿ ವತಿಯಿಂದ 3.50 ಲಕ್ಷ ರೂಪಾಯಿ ಅನುದಾನದಲ್ಲಿ ಆಗಲೇ ಹೊಸ ಕಟ್ಟಡವೂ ನಿರ್ಮಾಣವಾಗಿದೆ. ಹಳೆ ಕಟ್ಟಡವನ್ನು ಹಾಗೇ ಬಿಟ್ಟಿದ್ದು ಯಾರೋ ಕಿಡಿಗೇಡಿಗಳು ಪಂಚಾಯಿತಿ ಅನುಮತಿ ಇಲ್ಲದೆ ನೆಲಸಮಗೊಳಿಸಿದ್ದಾರೆ ಎಂದು ಹೇಳಿದರು. <br /> <br /> ಈ ಸಂಬಂಧ ಅವರು ಚನ್ನರಾಯಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>