<p><strong>ಗುಂಡ್ಲುಪೇಟೆ:</strong> ಅಂಗನವಾಡಿ ಕಾರ್ಯಕರ್ತೆಯೊಬ್ಬರ ವರ್ಗಾವಣೆ ವಿಚಾರವಾಗಿ ಗುಂಪೊಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ಜರುಗಿದೆ.<br /> <br /> ಭೋಗಯ್ಯನಹುಂಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಮತಾ ವರ್ಗಾವಣೆ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಅವರ ಜೀಪನ್ನು ತಡೆದ ಗುಂಪು ಮೇಲೆ ಹಲ್ಲೆ ನಡೆಸಿದೆ.<br /> <br /> `ಈ ಗುಂಪಿನಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಮಲ್ಲಿದಾಸ್, ನಟರಾಜ್, ಅಜಯ್, ಗಿರೀಶ್, ಪಾಪಣ್ಣ, ನಟೇಶ್, ಮಂಜು, ಶಿವನಾಗಪ್ಪ ಅವರುಗಳಿದ್ದು ಎಲ್ಲರೂ ಸೇರಿ ಹಲ್ಲೆ ನಡೆಸಿದ್ದಾರೆ~ ಎಂದು ಮದ್ದಾನಸ್ವಾಮಿ ಪೋಲಿಸರಿಗೆ ದೂರು ನೀಡಿದ್ದಾರೆ.<br /> <br /> ಗ್ರಾಮದಲ್ಲಿ ಈ ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಅನೇಕ ದೂರುಗಳು ಬಂದಿವೆ, ಗ್ರಾಮದವರೇ ಈಕೆಯನ್ನು ಬೇಡ ಎನ್ನುತ್ತಿದ್ದಾರೆ ಆದ ಕಾರಣ ನಾನು ಈಕೆಗೆ ಕಳೆದ ಒಂದು ತಿಂಗಳಿನಿಂದ ಕರ್ತವ್ಯ ನೀಡಿಲ್ಲ ಎಂದು ಮದ್ದಾನಸ್ವಾಮಿ ತಿಳಿಸಿದ್ದಾರೆ.<br /> <br /> `ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆಂದು~ ತಾಲ್ಲೂಕು ಪಂಚಾಯಿತಿ ಸದಸ್ಯ ಮಲ್ಲಿದಾಸ್ ದೂರಿದ್ದು, ಗುಂಡ್ಲುಪೇಟೆ ಪೋಲಿಸರಿಗೆ ದೂರು ನೀಡಿದ್ದಾರೆ. <br /> <br /> `ಜಾತಿ ನಿಂದನೆಯ ಜೊತೆಗೆ ನನ್ನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು ಹಾಗೂ ಮಮತಾ ವರ್ಗಾವಣೆ ವಿಚಾರವಾಗಿ ಮಾತನಾಡಲು ಹೋದಾಗ ಬೇಜವಾಬ್ದಾರಿತನದಿಂದ ನಡೆದು ಕೊಂಡಿದ್ದಾರೆ~ ಎಂದು ದೂರಿನಲ್ಲಿ ತಿಳಿಸಿದ್ದಾರೆ. <br /> <br /> `ಮಮತಾಳಿಗೆ ಕಳೆದ ಒಂದು ತಿಂಗಳಿನಿಂದ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ~ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಅಂಗನವಾಡಿ ಕಾರ್ಯಕರ್ತೆಯೊಬ್ಬರ ವರ್ಗಾವಣೆ ವಿಚಾರವಾಗಿ ಗುಂಪೊಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ಜರುಗಿದೆ.<br /> <br /> ಭೋಗಯ್ಯನಹುಂಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಮತಾ ವರ್ಗಾವಣೆ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ಅವರ ಜೀಪನ್ನು ತಡೆದ ಗುಂಪು ಮೇಲೆ ಹಲ್ಲೆ ನಡೆಸಿದೆ.<br /> <br /> `ಈ ಗುಂಪಿನಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಮಲ್ಲಿದಾಸ್, ನಟರಾಜ್, ಅಜಯ್, ಗಿರೀಶ್, ಪಾಪಣ್ಣ, ನಟೇಶ್, ಮಂಜು, ಶಿವನಾಗಪ್ಪ ಅವರುಗಳಿದ್ದು ಎಲ್ಲರೂ ಸೇರಿ ಹಲ್ಲೆ ನಡೆಸಿದ್ದಾರೆ~ ಎಂದು ಮದ್ದಾನಸ್ವಾಮಿ ಪೋಲಿಸರಿಗೆ ದೂರು ನೀಡಿದ್ದಾರೆ.<br /> <br /> ಗ್ರಾಮದಲ್ಲಿ ಈ ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಅನೇಕ ದೂರುಗಳು ಬಂದಿವೆ, ಗ್ರಾಮದವರೇ ಈಕೆಯನ್ನು ಬೇಡ ಎನ್ನುತ್ತಿದ್ದಾರೆ ಆದ ಕಾರಣ ನಾನು ಈಕೆಗೆ ಕಳೆದ ಒಂದು ತಿಂಗಳಿನಿಂದ ಕರ್ತವ್ಯ ನೀಡಿಲ್ಲ ಎಂದು ಮದ್ದಾನಸ್ವಾಮಿ ತಿಳಿಸಿದ್ದಾರೆ.<br /> <br /> `ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆಂದು~ ತಾಲ್ಲೂಕು ಪಂಚಾಯಿತಿ ಸದಸ್ಯ ಮಲ್ಲಿದಾಸ್ ದೂರಿದ್ದು, ಗುಂಡ್ಲುಪೇಟೆ ಪೋಲಿಸರಿಗೆ ದೂರು ನೀಡಿದ್ದಾರೆ. <br /> <br /> `ಜಾತಿ ನಿಂದನೆಯ ಜೊತೆಗೆ ನನ್ನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು ಹಾಗೂ ಮಮತಾ ವರ್ಗಾವಣೆ ವಿಚಾರವಾಗಿ ಮಾತನಾಡಲು ಹೋದಾಗ ಬೇಜವಾಬ್ದಾರಿತನದಿಂದ ನಡೆದು ಕೊಂಡಿದ್ದಾರೆ~ ಎಂದು ದೂರಿನಲ್ಲಿ ತಿಳಿಸಿದ್ದಾರೆ. <br /> <br /> `ಮಮತಾಳಿಗೆ ಕಳೆದ ಒಂದು ತಿಂಗಳಿನಿಂದ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ~ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>