<p>ಚಿಕ್ಕಬಳ್ಳಾಪುರ: ಹೆಚ್ಚುವರಿಯಾಗಿ ಆರು ತಿಂಗಳಿನಿಂದ ಬಾಕಿಯುಳಿದಿರುವ ಗೌರವಧನ ನೀಡುವುದು, ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುವುದು ಸೇರಿ ದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಸಿಐಟಿಯು ಅಂಗನ ವಾಡಿ ನೌಕರರ ಸಂಘದ ಸದಸ್ಯೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ನಗರದ ಪ್ರವಾಸಿ ಮಂದಿರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡ ಸಂಘದ ಸದಸ್ಯೆಯರು, `ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿ ಸಿದರು.<br /> <br /> ಸಂಘದ ಜಿಲ್ಲಾ ಘಟಕದ ಕಾರ್ಯ ದರ್ಶಿ ಲಕ್ಷ್ಮಿದೇವಮ್ಮ ಮಾತನಾಡಿ, `ಗೌರವಧನವನ್ನು ಹೆಚ್ಚುವರಿಯಾಗಿ ಏರಿಕೆ ಮಾಡಲಾಗಿದ್ದರೂ ಅಂಗನವಾಡಿ ನೌಕರರಿಗೆ ಇನ್ನೂ ಲಭ್ಯವಾಗಿಲ್ಲ. ಏಪ್ರಿಲ್ನಲ್ಲೇ ಗೌರವ ಧನವನ್ನು ಏರಿಗೆ ಮಾಡಿದ್ದರೂ ಈವರೆಗೆ ಯಾರಿಗೂ ನೀಡಲಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಮನವಿಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿ ಸುತ್ತಿಲ್ಲ~ ಎಂದು ಆರೋಪಿಸಿದರು.<br /> <br /> `ಭಾಗ್ಯಲಕ್ಷ್ಮಿ ಬಾಂಡ್ನ ಪ್ರೋತ್ಸಾಹ ಧನವನ್ನು ಕೂಡಲೇ ವಿತರಿಸಬೇಕು, ಬಾಕಿಯಿರುವ ಭಾಗ್ಯಲಕ್ಷ್ಮಿ ಬಾಂಡ್ಗಳನ್ನು ಕೂಡಲೇ ವಿತರಿಸಬೇಕು, ಖಾಲಿ ಯಿರುವ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಕೂಡಲೇ ಭರ್ತಿ ಮಾಡ ಬೇಕು~ ಎಂದು ಅವರು ಆಗ್ರಹಿಸಿದರು. ಸಂಘದ ಮುಖಂಡರಾದ ಭಾಗ್ಯಮ್ಮ, ಜಯಲಕ್ಷ್ಮಮ್ಮ, ಆಯಿಷಾ, ಸುನಂದಮ್ಮ ಮತ್ತಿತರರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಹೆಚ್ಚುವರಿಯಾಗಿ ಆರು ತಿಂಗಳಿನಿಂದ ಬಾಕಿಯುಳಿದಿರುವ ಗೌರವಧನ ನೀಡುವುದು, ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುವುದು ಸೇರಿ ದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಸಿಐಟಿಯು ಅಂಗನ ವಾಡಿ ನೌಕರರ ಸಂಘದ ಸದಸ್ಯೆಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ನಗರದ ಪ್ರವಾಸಿ ಮಂದಿರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡ ಸಂಘದ ಸದಸ್ಯೆಯರು, `ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿ ಸಿದರು.<br /> <br /> ಸಂಘದ ಜಿಲ್ಲಾ ಘಟಕದ ಕಾರ್ಯ ದರ್ಶಿ ಲಕ್ಷ್ಮಿದೇವಮ್ಮ ಮಾತನಾಡಿ, `ಗೌರವಧನವನ್ನು ಹೆಚ್ಚುವರಿಯಾಗಿ ಏರಿಕೆ ಮಾಡಲಾಗಿದ್ದರೂ ಅಂಗನವಾಡಿ ನೌಕರರಿಗೆ ಇನ್ನೂ ಲಭ್ಯವಾಗಿಲ್ಲ. ಏಪ್ರಿಲ್ನಲ್ಲೇ ಗೌರವ ಧನವನ್ನು ಏರಿಗೆ ಮಾಡಿದ್ದರೂ ಈವರೆಗೆ ಯಾರಿಗೂ ನೀಡಲಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಮನವಿಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿ ಸುತ್ತಿಲ್ಲ~ ಎಂದು ಆರೋಪಿಸಿದರು.<br /> <br /> `ಭಾಗ್ಯಲಕ್ಷ್ಮಿ ಬಾಂಡ್ನ ಪ್ರೋತ್ಸಾಹ ಧನವನ್ನು ಕೂಡಲೇ ವಿತರಿಸಬೇಕು, ಬಾಕಿಯಿರುವ ಭಾಗ್ಯಲಕ್ಷ್ಮಿ ಬಾಂಡ್ಗಳನ್ನು ಕೂಡಲೇ ವಿತರಿಸಬೇಕು, ಖಾಲಿ ಯಿರುವ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಕೂಡಲೇ ಭರ್ತಿ ಮಾಡ ಬೇಕು~ ಎಂದು ಅವರು ಆಗ್ರಹಿಸಿದರು. ಸಂಘದ ಮುಖಂಡರಾದ ಭಾಗ್ಯಮ್ಮ, ಜಯಲಕ್ಷ್ಮಮ್ಮ, ಆಯಿಷಾ, ಸುನಂದಮ್ಮ ಮತ್ತಿತರರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>