<p><strong>ಸಿಂಧನೂರು : </strong>ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಎ.ಐ.ಟಿ.ಯು.ಸಿ ಸಂಘಟನೆಯ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದರು. ಪ್ರವಾಸಿ ಮಂದಿರದಿಂದ ಪ್ರಾರಂಭವಾದ ಮೆರವಣಿಗೆ ಗಾಂಧಿವೃತ್ತ, ರಾಯಚೂರು ರಸ್ತೆ ಮೂಲಕ ತೆರಳಿ ವಾಸವಿ ಕಲ್ಯಾಣ ಮಂಟಪದಲ್ಲಿ ಸಮಾವೇಶಗೊಂಡಿತು. <br /> <br /> ಅಂಗನವಾಡಿ ಫೆಡರೇಷನ್ ರಾಜ್ಯ ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ ಕೆಂಭಾವುಟ ಬೀಸುವ ಮೂಲಕ ಮೆರವಣಿಗೆ ಉದ್ಘಾಟಿಸಿದರು. ಒಂದು ಗಂಟೆಕಾಲ ನಡೆದ ಮೆರವಣಿಗೆಯಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. <br /> <br /> ಅಂಗನವಾಡಿ ಫೆಡರೇಷನ್ನ ರಾಜ್ಯ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ, ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷ ಸಂಗಯ್ಯಸ್ವಾಮಿ, ರಾಜ್ಯ ಸಮಿತಿ ಮುಖಂಡರಾದ ಪ್ರಭಾವತಿ, ಸುಲೋಚನಾ, ತಾಲ್ಲೂಕು ಫೆಡರೇಷನ್ ಮುಖಂಡರಾದ ಯಮನಮ್ಮ, ಅಮರಮ್ಮ, ಗಿರಿಜಮ್ಮ, ಮರಿಯಮ್ಮ, ಎ.ಐ.ಟಿ.ಯು.ಸಿ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಗದ್ರಟಗಿ, ಹನುಮೇಶ ಗಿಣಿವಾರ, ಬಸವರಾಜ ಬಾದರ್ಲಿ, ಚಂದ್ರಶೇಖರ ಕ್ಯಾತ್ನಟ್ಟಿ ಮತ್ತಿತರರು ಮೆರವಣಿಗೆ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು : </strong>ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಎ.ಐ.ಟಿ.ಯು.ಸಿ ಸಂಘಟನೆಯ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದರು. ಪ್ರವಾಸಿ ಮಂದಿರದಿಂದ ಪ್ರಾರಂಭವಾದ ಮೆರವಣಿಗೆ ಗಾಂಧಿವೃತ್ತ, ರಾಯಚೂರು ರಸ್ತೆ ಮೂಲಕ ತೆರಳಿ ವಾಸವಿ ಕಲ್ಯಾಣ ಮಂಟಪದಲ್ಲಿ ಸಮಾವೇಶಗೊಂಡಿತು. <br /> <br /> ಅಂಗನವಾಡಿ ಫೆಡರೇಷನ್ ರಾಜ್ಯ ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ ಕೆಂಭಾವುಟ ಬೀಸುವ ಮೂಲಕ ಮೆರವಣಿಗೆ ಉದ್ಘಾಟಿಸಿದರು. ಒಂದು ಗಂಟೆಕಾಲ ನಡೆದ ಮೆರವಣಿಗೆಯಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. <br /> <br /> ಅಂಗನವಾಡಿ ಫೆಡರೇಷನ್ನ ರಾಜ್ಯ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ, ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷ ಸಂಗಯ್ಯಸ್ವಾಮಿ, ರಾಜ್ಯ ಸಮಿತಿ ಮುಖಂಡರಾದ ಪ್ರಭಾವತಿ, ಸುಲೋಚನಾ, ತಾಲ್ಲೂಕು ಫೆಡರೇಷನ್ ಮುಖಂಡರಾದ ಯಮನಮ್ಮ, ಅಮರಮ್ಮ, ಗಿರಿಜಮ್ಮ, ಮರಿಯಮ್ಮ, ಎ.ಐ.ಟಿ.ಯು.ಸಿ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಗದ್ರಟಗಿ, ಹನುಮೇಶ ಗಿಣಿವಾರ, ಬಸವರಾಜ ಬಾದರ್ಲಿ, ಚಂದ್ರಶೇಖರ ಕ್ಯಾತ್ನಟ್ಟಿ ಮತ್ತಿತರರು ಮೆರವಣಿಗೆ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>