<p>ಬೆಂಗಳೂರು: ಆಯಾ ವಲಯಕ್ಕೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಬೇರೆ ಬೇರೆ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ವಾರದಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.<br /> <br /> ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಇದೇ 6ರಂದು ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಆ ಜಿಲ್ಲೆಯ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಅವರೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಮೊದಲ ಹಂತದಲ್ಲಿ 45 ತಾಲ್ಲೂಕುಗಳಲ್ಲಿ ಇದು ಜಾರಿಗೊಳ್ಳಲಿದೆ. ಪ್ರತಿ ಮಗುವಿಗೆ ನೀಡುವ ಆಹಾರಕ್ಕೆ ರೂ 4.50 ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. <br /> <br /> ಅಲ್ಲದೆ ಇದಕ್ಕಾಗಿ ನೀಡುವ ಸಹಾಯಧನವನ್ನು ಪ್ರತಿ ಮಗುವಿಗೆ ಮೂರು ರೂಪಾಯಿ ಜಾಸ್ತಿ ಮಾಡುಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.</p>.<p>`ರವೆ ಉಂಡೆ, ರಾಗಿ, ಅಕ್ಕಿ ಪಾಯಸ, ಅವಲಕ್ಕಿ ಮಿಶ್ರಣ, ಪುಳಿಯೋಗರೆ, ಚಿತ್ರಾನ್ನ, ಅನ್ನ ಸಂಬಾರು ಇತ್ಯಾದಿಗಳನ್ನು ಮಕ್ಕಳಿಗೆ ನೀಡಲಾಗುವುದು. ಇದರ ಜೊತೆಗೆ ಚಪಾತಿ, ರಾಗಿಮುದ್ದೆಯನ್ನು ಗರ್ಭಿಣಿ, ಬಾಣಂತಿಯರಿಗೆ ನೀಡುತ್ತೇವೆ~ ಎಂದು ತಿಳಿಸಿದರು.<br /> <br /> ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಹತ್ತು ಅಂಗನವಾಡಿ ಕೇಂದ್ರಗಳಲ್ಲಿ `ಸ್ಪಿರುಲಿನ~ ಮಾತ್ರೆಯನ್ನು ಉಚಿತವಾಗಿ ಎರಡು ತಿಂಗಳ ಕಾಲ ನೀಡಲಾಗುತ್ತದೆ. ಇದರ ಫಲಿತಾಂಶವನ್ನು ಆಧರಿಸಿ ಬೇರೆ ಕಡೆಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.<br /> <br /> 2009-10ನೇ ಸಾಲಿನವರೆಗಿನ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆಯಾ ವಲಯಕ್ಕೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಬೇರೆ ಬೇರೆ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ವಾರದಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.<br /> <br /> ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಇದೇ 6ರಂದು ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಆ ಜಿಲ್ಲೆಯ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಅವರೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಮೊದಲ ಹಂತದಲ್ಲಿ 45 ತಾಲ್ಲೂಕುಗಳಲ್ಲಿ ಇದು ಜಾರಿಗೊಳ್ಳಲಿದೆ. ಪ್ರತಿ ಮಗುವಿಗೆ ನೀಡುವ ಆಹಾರಕ್ಕೆ ರೂ 4.50 ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. <br /> <br /> ಅಲ್ಲದೆ ಇದಕ್ಕಾಗಿ ನೀಡುವ ಸಹಾಯಧನವನ್ನು ಪ್ರತಿ ಮಗುವಿಗೆ ಮೂರು ರೂಪಾಯಿ ಜಾಸ್ತಿ ಮಾಡುಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.</p>.<p>`ರವೆ ಉಂಡೆ, ರಾಗಿ, ಅಕ್ಕಿ ಪಾಯಸ, ಅವಲಕ್ಕಿ ಮಿಶ್ರಣ, ಪುಳಿಯೋಗರೆ, ಚಿತ್ರಾನ್ನ, ಅನ್ನ ಸಂಬಾರು ಇತ್ಯಾದಿಗಳನ್ನು ಮಕ್ಕಳಿಗೆ ನೀಡಲಾಗುವುದು. ಇದರ ಜೊತೆಗೆ ಚಪಾತಿ, ರಾಗಿಮುದ್ದೆಯನ್ನು ಗರ್ಭಿಣಿ, ಬಾಣಂತಿಯರಿಗೆ ನೀಡುತ್ತೇವೆ~ ಎಂದು ತಿಳಿಸಿದರು.<br /> <br /> ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಹತ್ತು ಅಂಗನವಾಡಿ ಕೇಂದ್ರಗಳಲ್ಲಿ `ಸ್ಪಿರುಲಿನ~ ಮಾತ್ರೆಯನ್ನು ಉಚಿತವಾಗಿ ಎರಡು ತಿಂಗಳ ಕಾಲ ನೀಡಲಾಗುತ್ತದೆ. ಇದರ ಫಲಿತಾಂಶವನ್ನು ಆಧರಿಸಿ ಬೇರೆ ಕಡೆಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.<br /> <br /> 2009-10ನೇ ಸಾಲಿನವರೆಗಿನ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>